ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ನಗರ ಸಮಿತಿ ವತಿಯಿಂದ “ಮಹಿಳಾ ಭದ್ರತೆಯೇ ಸ್ವಾತಂತ್ರ್ಯದ ಅಳತೆಗೋಲು” ಎಂಬ ಧ್ಯೇಯ ವಾಕ್ಯದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಂಜಯ ನಗರ ಜಂಕ್ಷನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ವನ್ನು ಅಧ್ಯಕ್ಷರಾದ ರುಬಿಯಾ ಬಾನು ನೆರವೇರಿಸಿದರು
ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷರಾದ ಶಮಾ ಉಜಿರೆ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉಪನ್ಯಾಸಕರಾದ ಶಶಿಕಲಾ ಸುರೇಶ್ ಸ್ವಾತಂತ್ರದ ಸಂದೇಶ ಭಾಷಣವನ್ನು ನೀಡಿದರು. ಅಡ್ವಕೇಟ್ ಅಸ್ಮಾ ರಿಝ್ವಾನ್, ಸಫ್ರಾ ಅನೀಶ್, ತಸ್ಲಿಮಾ ನವಾಝ್, ಉಪಸ್ಥಿತರಿದ್ದರು.
ಉಪನ್ಯಾಸಕರಾದ ಶಶಿಕಲಾ ಅವರನ್ನು ಸನ್ಮಾನಿಸಿ, ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಿಳೆಯರಿಗೆ ನಡೆದ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನಸೀಮಾ ಸ್ವಾಗತಿಸಿ, ಸುಝಾನ ವಂದಿಸಿದರು. ರಫಾ ಶಬೀರ್ ಕಾರ್ಯಕ್ರಮ ನಿರೂಪಿಸಿದರು.











