ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಸಂಘದ ವಠಾರದಲ್ಲಿ ನಡೆಯಿತು .
ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಧ್ವಜಾರೋಹಣ ನೆರವೇರಿಸಿ , ಸ್ವಾತಂತ್ರ್ಯೋತ್ಸವದ ಮಹತ್ವವನ್ನು ತಿಳಿಸಿದರು .ಸಂಘದ ಉಪಾಧ್ಯಕ್ಷರ ರತ್ನಾಕರ.ಬಿ ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ ,ಸಂಘದ ನಿರ್ದೇಶಕರು ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು..











