July 23, 2026
ಚಿತ್ರ ವರದಿವರದಿ

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ ಹಾಗೂ ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ಹೊಕ್ಕಡಿಗೋಳಿ ಇದರ ವತಿಯಿಂದ 79ನೇ ಸ್ವಾತಂತ್ರ್ಯ ದಿನಚರಣೆ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು. ಸಿರಾಜುಲ್ ಹುದಾ ಮದ್ರಸ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಮಾತ್ ಅಧ್ಯಕ್ಷರಾದ ಹೆಚ್ ಕೆ ಮುಹಮ್ಮದ್ ಶರೀಫ್ ರವರು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಜಮಾತ್ ಕಾರ್ಯದರ್ಶಿ ಫಾರೂಕ್ ಹೊಕ್ಕಾಡಿಗೋಳಿ ಸ್ವಾಗತ ಭಾಷಣ ಮಾಡಿದರು. ಮಸೀದಿ ಖದೀಬರಾದ ಮುಹಮ್ಮದ್ ನಿಯಾಝ್ ಫೈಝಿ ದುಹಾದೊಂದಿಗೆ ಸ್ವಾತಂತ್ರದ ಬಗ್ಗೆ ಶುಭ ಸಂದೇಶ ನೀಡಿದರು. ಗೌರವಧ್ಯಕ್ಷ ಹೆಚ್ ಮಹಮ್ಮದ್ ಇಕ್ಬಾಲ್ ಸ್ವಾತಂತ್ರ್ಯಹೋರಾಟದ ಬಗ್ಗೆ ವಿವರಿಸಿದರು. ಮದರಸ ಮಕ್ಕಳು ಹಾಗೂ ಜಮಾತ್ ಬಾಂಧವರಿಗೆ ಮಸೀದಿ ವಿದ್ಯಾರ್ಥಿ ರಿಹಾನ್ ಅಹಮದ್ ಭಾವ ಸ್ವಾತಂತ್ರ್ಯದ ಹಾಡು ಹಾಡಿದರು.

ಈ ಕಾರ್ಯಕ್ರಮದಲ್ಲಿ ಸಿರಾಜುಲ್ ಹುದಾ ಯಂಗ್ ಮೆನ್ಸ್ ಅಧ್ಯಕ್ಷ ಹೆಚ್ ಕೆ ಲತೀಫ್, ಆಡಳಿತ ಕಮಿಟಿ ಸದಸ್ಯರು, ಯಂಗ್ ಮೆನ್ಸ್ ಸದಸ್ಯರು, ಜಮಾತ್ ಬಾಂಧವರು ಮತ್ತು ಮದ್ರಸ ಮಕ್ಕಳು ಉಪಸ್ಥಿತರಿದ್ದರು. ಸಿರಜುಲ್ ಹುದಾ ಯಂಗ್ ಮೆನ್ಸ್ ಕಾರ್ಯದರ್ಶಿ ಎಚ್ ಐ ರಫೀಕ್ ಧನ್ಯವಾದ ಸಮರ್ಪಿಸಿದರು. ರಾಷ್ಟ್ರ ಗೀತೆ ಹಾಡಿ ಸಿಹಿ ತಿಂಡಿ ವಿತರಣೆ ಮಾಡಿದ ನಂತರ ಮೂರು ಸ್ವಲಾತಿನೊಂದಿಗೆ ಕಾರ್ಯಕ್ರಮವು ಮುಕ್ತಾಯವಾಯಿತು.

Related posts

ಮಲವಂತಿಗೆ : ಕೃಷಿಕನನ್ನು ಒಕ್ಕೆಲಬ್ಬಿಸಿ ಕೃಷಿಯನ್ನು ಸಂಪೂರ್ಣ ನಾಶ ಪಡಿಸಿದ ಅರಣ್ಯ ಇಲಾಖೆ

Suddi Udaya

ವರ್ಗಾವಣೆಗೊಂಡ ನಿಡ್ಲೆ ಉಪ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಶ್ರೀಮತಿ ಪುಟ್ಟಮ್ಮರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ, ಹಲವರಿಗೆ ಗಂಭೀರ ಗಾಯ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!