25.5 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿವರದಿ

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ ಹಾಗೂ ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ಹೊಕ್ಕಡಿಗೋಳಿ ಇದರ ವತಿಯಿಂದ 79ನೇ ಸ್ವಾತಂತ್ರ್ಯ ದಿನಚರಣೆ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು. ಸಿರಾಜುಲ್ ಹುದಾ ಮದ್ರಸ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಮಾತ್ ಅಧ್ಯಕ್ಷರಾದ ಹೆಚ್ ಕೆ ಮುಹಮ್ಮದ್ ಶರೀಫ್ ರವರು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಜಮಾತ್ ಕಾರ್ಯದರ್ಶಿ ಫಾರೂಕ್ ಹೊಕ್ಕಾಡಿಗೋಳಿ ಸ್ವಾಗತ ಭಾಷಣ ಮಾಡಿದರು. ಮಸೀದಿ ಖದೀಬರಾದ ಮುಹಮ್ಮದ್ ನಿಯಾಝ್ ಫೈಝಿ ದುಹಾದೊಂದಿಗೆ ಸ್ವಾತಂತ್ರದ ಬಗ್ಗೆ ಶುಭ ಸಂದೇಶ ನೀಡಿದರು. ಗೌರವಧ್ಯಕ್ಷ ಹೆಚ್ ಮಹಮ್ಮದ್ ಇಕ್ಬಾಲ್ ಸ್ವಾತಂತ್ರ್ಯಹೋರಾಟದ ಬಗ್ಗೆ ವಿವರಿಸಿದರು. ಮದರಸ ಮಕ್ಕಳು ಹಾಗೂ ಜಮಾತ್ ಬಾಂಧವರಿಗೆ ಮಸೀದಿ ವಿದ್ಯಾರ್ಥಿ ರಿಹಾನ್ ಅಹಮದ್ ಭಾವ ಸ್ವಾತಂತ್ರ್ಯದ ಹಾಡು ಹಾಡಿದರು.

ಈ ಕಾರ್ಯಕ್ರಮದಲ್ಲಿ ಸಿರಾಜುಲ್ ಹುದಾ ಯಂಗ್ ಮೆನ್ಸ್ ಅಧ್ಯಕ್ಷ ಹೆಚ್ ಕೆ ಲತೀಫ್, ಆಡಳಿತ ಕಮಿಟಿ ಸದಸ್ಯರು, ಯಂಗ್ ಮೆನ್ಸ್ ಸದಸ್ಯರು, ಜಮಾತ್ ಬಾಂಧವರು ಮತ್ತು ಮದ್ರಸ ಮಕ್ಕಳು ಉಪಸ್ಥಿತರಿದ್ದರು. ಸಿರಜುಲ್ ಹುದಾ ಯಂಗ್ ಮೆನ್ಸ್ ಕಾರ್ಯದರ್ಶಿ ಎಚ್ ಐ ರಫೀಕ್ ಧನ್ಯವಾದ ಸಮರ್ಪಿಸಿದರು. ರಾಷ್ಟ್ರ ಗೀತೆ ಹಾಡಿ ಸಿಹಿ ತಿಂಡಿ ವಿತರಣೆ ಮಾಡಿದ ನಂತರ ಮೂರು ಸ್ವಲಾತಿನೊಂದಿಗೆ ಕಾರ್ಯಕ್ರಮವು ಮುಕ್ತಾಯವಾಯಿತು.

Related posts

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್‌ಇ ಶಾಲೆಗೆ ಶೇ,100 ಫಲಿತಾಂಶ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರಿಗೆ ಧರ್ಮಸ್ಥಳದಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!