September 6, 2026
ಚಿತ್ರ ವರದಿವರದಿ

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ ಹಾಗೂ ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ಹೊಕ್ಕಡಿಗೋಳಿ ಇದರ ವತಿಯಿಂದ 79ನೇ ಸ್ವಾತಂತ್ರ್ಯ ದಿನಚರಣೆ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು. ಸಿರಾಜುಲ್ ಹುದಾ ಮದ್ರಸ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಮಾತ್ ಅಧ್ಯಕ್ಷರಾದ ಹೆಚ್ ಕೆ ಮುಹಮ್ಮದ್ ಶರೀಫ್ ರವರು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಜಮಾತ್ ಕಾರ್ಯದರ್ಶಿ ಫಾರೂಕ್ ಹೊಕ್ಕಾಡಿಗೋಳಿ ಸ್ವಾಗತ ಭಾಷಣ ಮಾಡಿದರು. ಮಸೀದಿ ಖದೀಬರಾದ ಮುಹಮ್ಮದ್ ನಿಯಾಝ್ ಫೈಝಿ ದುಹಾದೊಂದಿಗೆ ಸ್ವಾತಂತ್ರದ ಬಗ್ಗೆ ಶುಭ ಸಂದೇಶ ನೀಡಿದರು. ಗೌರವಧ್ಯಕ್ಷ ಹೆಚ್ ಮಹಮ್ಮದ್ ಇಕ್ಬಾಲ್ ಸ್ವಾತಂತ್ರ್ಯಹೋರಾಟದ ಬಗ್ಗೆ ವಿವರಿಸಿದರು. ಮದರಸ ಮಕ್ಕಳು ಹಾಗೂ ಜಮಾತ್ ಬಾಂಧವರಿಗೆ ಮಸೀದಿ ವಿದ್ಯಾರ್ಥಿ ರಿಹಾನ್ ಅಹಮದ್ ಭಾವ ಸ್ವಾತಂತ್ರ್ಯದ ಹಾಡು ಹಾಡಿದರು.

ಈ ಕಾರ್ಯಕ್ರಮದಲ್ಲಿ ಸಿರಾಜುಲ್ ಹುದಾ ಯಂಗ್ ಮೆನ್ಸ್ ಅಧ್ಯಕ್ಷ ಹೆಚ್ ಕೆ ಲತೀಫ್, ಆಡಳಿತ ಕಮಿಟಿ ಸದಸ್ಯರು, ಯಂಗ್ ಮೆನ್ಸ್ ಸದಸ್ಯರು, ಜಮಾತ್ ಬಾಂಧವರು ಮತ್ತು ಮದ್ರಸ ಮಕ್ಕಳು ಉಪಸ್ಥಿತರಿದ್ದರು. ಸಿರಜುಲ್ ಹುದಾ ಯಂಗ್ ಮೆನ್ಸ್ ಕಾರ್ಯದರ್ಶಿ ಎಚ್ ಐ ರಫೀಕ್ ಧನ್ಯವಾದ ಸಮರ್ಪಿಸಿದರು. ರಾಷ್ಟ್ರ ಗೀತೆ ಹಾಡಿ ಸಿಹಿ ತಿಂಡಿ ವಿತರಣೆ ಮಾಡಿದ ನಂತರ ಮೂರು ಸ್ವಲಾತಿನೊಂದಿಗೆ ಕಾರ್ಯಕ್ರಮವು ಮುಕ್ತಾಯವಾಯಿತು.

Related posts

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya

ರಾಜ್ಯಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ : ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಪ್ರಥಮ

Suddi Udaya

ಉರುವಾಲು: ಬಾಯ್ತಾರು ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ: ಬ್ರಹ್ಮಕಲಶೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ

Suddi Udaya

ಕಾಶಿಪಟ್ಣ: ಚಂಪಾ ಅಣ್ಣಿ ದೇವಾಡಿಗ ನಿಧನ

Suddi Udaya

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

Suddi Udaya

ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಕೆಳಗೆ ಬಿದ್ದ ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು: ಗೇರುಕಟ್ಟೆ ರೇಷ್ಮೆ ರೋಡ್ ಬಳಿ ನಡೆದ ಘಟನೆ

Suddi Udaya
error: Content is protected !!