27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆಯಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷ ಶ್ರೀಧರ್ ಜಿ.ಭಿಡೆ ಯವರು ಧ್ವಜಾರೋಹಣ ನೆರವೇರಿಸಿದರು.

ಎಂಸಿಎಫ್ ಮಂಗಳೂರು ಇವರ ಸಹಭಾಗಿತ್ವದೊಂದಿಗೆ ಜೈ ಜವಾನ್ ಜೈ ಕಿಸಾನ್ ಆಶಯದಂತೆ ಕೃಷಿಯಲ್ಲಿ ತೊಡಗಿಸಿಕೊಂಡಿರುವ ನಿವೃತ್ತ ಸೈನಿಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಯೋಧರು ಪ್ರಸಕ್ತ ಕೃಷಿಕರಾಗಿ ಸಂಘದ ಸದಸ್ಯರು ಆಗಿರುವಂತಹ ಎ.ಕೆ.ಶಿವನ್ ಉಜಿರೆ, ಶ್ರೀ ಗೋಪಾಲಕೃಷ್ಣ ಭಟ್ ಕಾಂಚೋಡು ಹಾಗೂ ತಂಗಚ್ಚನ್ ಧರ್ಮಸ್ಥಳ ಇವರನ್ನು ಉಭಯ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.

ಉಪಾಧ್ಯಕ್ಷ ಅನಂತ ಭಟ್ ಎಂ., ನಿರ್ದೇಶಕರಾದ ಬಾಲಕೃಷ್ಣ ಗೌಡ, ಜಯಶ್ರೀ ಡಿ.ಎಂ., ಭೈರಪ್ಪ ಉಪಸ್ಥಿತರಿದ್ದರು. ಸಿಇಒ ರಾಜು ಶೆಟ್ಟಿ ಸ್ವಾಗತಿಸಿದರು. ಎಂಸಿ ಎಫ್ ಮಂಗಳೂರು ಇದರ ಮಾರಾಟ ಅಧಿಕಾರಿ ಮನೋಜ್ ವಂದಿಸಿದರು. ಎಂಸಿಎಫ್ ಸಿಬ್ಬಂದಿ ತೇಜಸ್ವಿ ಮತ್ತು ಸಂಘದ ಸಿಬ್ಬಂದಿ ಭಾಗವಹಿಸಿದ್ದರು.

Related posts

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕಾಯರ್ತಡ್ಕ ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ.ವಿ ಜೋಸೆಫ್ ನಿಧನ

Suddi Udaya

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಬಂದಾರು: ಸಂವಿಧಾನ ಜಾಗೃತಿ ಜಾಥ

Suddi Udaya
error: Content is protected !!