July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

ಗುರುವಾಯನಕೆರೆ: “ಸ್ವಾತಂತ್ರವೆಂದರೆ ಅದು ಬ್ರಿಟಿಷರ ವಿರುದ್ಧದ ಹೋರಾಟವಲ್ಲ, ಯಾವುದೇ ಒಬ್ಬ ವ್ಯಕ್ತಿಯ ಅಭಿವ್ಯಕ್ತಿಗೆ ದಕ್ಕೆಯನ್ನು ಉಂಟುಮಾಡುವ ಯಾವುದೇ ಘಟನೆಗಳ ವಿರುದ್ಧವಾಗಿ ಪ್ರತಿಭಟಿಸುವುದೇ ನಿಜವಾದ ಸ್ವಾತಂತ್ರ ಇಂತಹ ಪ್ರತಿಭಟನಾ ಸಾಮರ್ಥ್ಯವನ್ನು ಇಂದು ಜನರು ಕಳೆದುಕೊಳ್ಳುತ್ತಿರುವುದು ದುರದೃಷ್ಟಕರ” ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸಹ ಸೇವಕರಾದ ನ.ಸೀತಾರಾಮ್ ರವರು ವಿಷಾದ ವ್ಯಕ್ತಪಡಿಸಿದರು.

ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಅರಮಲೆಬೆಟ್ಟ ಕ್ಯಾಂಪಸ್ ನಲ್ಲಿ 79ನೇ ಸ್ವಾತಂತ್ರೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.” ಭಾರತವು ಮೂಲತಃ ಸಂಪತ್ಭರಿತವಾದ ರಾಷ್ಟ್ರ ಅಂದಿನ ಕಾಲದಲ್ಲಿಯೇ ನಮ್ಮ ದೇಶ ವಿಶ್ವಗುರುವಾಗಿತ್ತು. ಇಂತಹ ಭಾರತದ ಮೇಲೆ ಅನೇಕ ವಿದೇಶಿಯರು ದಾಳಿ ಮಾಡಿ ಭಾರತೀಯರನ್ನು ಸ್ವಾತಂತ್ರ್ಯ ಹೀನರನ್ನಾಗಿಸಿದರು. ಇಂತಹ ದುಸ್ಥಿತಿಗೆ ಭಾರತೀಯರೇ ಕಾರಣ ಎಂಬುದನ್ನು ನಾವೆಲ್ಲರೂ ಮನಗಾಣಬೇಕು. ಕುವೆಂಪುರವರ ವಾಣಿಯಂತೆ ನವ ಭಾರತದ ನಿರ್ಮಾಣಕ್ಕೆ ಇಂದಿನ ಯುವಕರು ವಿದ್ಯಾರ್ಥಿಗಳು ಶ್ರಮಿಸಬೇಕು”ಎಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀ ಕ್ಷೇತ್ರ ಅರಮಲೆ ಬೆಟ್ಟದ ಆಡಳಿತ ಮೊಕ್ತೇಸರ ರಾದ ಸುಕೇಶ್ ಕುಮಾರ್ ಜೈನ ರವರು ಮಾತನಾಡಿ ” ಎಕ್ಸೆಲ್ ಕಾಲೇಜು ಭವ್ಯ ಭವಿಷ್ಯವನ್ನು ಹೊಂದಿದೆ. ಇಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ಕಟ್ಟಿಕೊಂಡು ಭವ್ಯ ರಾಷ್ಟ್ರವನ್ನು ಕಟ್ಟಲು ಮುಂದಾಗಬೇಕು” ಎಂದು ಕರೆ ನೀಡಿದರು.
ಎಕ್ಸೆಲ್ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರು ಮಾತನಾಡಿ ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಪ್ರತಿ ವಿದ್ಯಾರ್ಥಿಯು ದೇಶ ಮತ್ತು ತಮ್ಮ ಪೋಷಕರಿಗೆ ಆಸ್ತಿ ಆಗಬೇಕೆಂದು ಶುಭ ಹಾರೈಕೆ ಮಾಡಿದರು. ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಮಾಜಿ ಟ್ರಸ್ಟಿ ಪ್ರಸನ್ನ ದರ್ಬೆ ಸೇರಿ ಹಲವು ಗಣ್ಯರು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಹಾಡಿದ ರಾಷ್ಟ್ರಗೀತೆ, ಧ್ವಜಗೀತೆ, ಮತ್ತು ವಂದೇ ಮಾತರಂ ಗೀತೆಗಳು ನೆರೆದಿದ್ದವರನ್ನು ರೋಮಾಂಚನಗೊಳಿಸಿದವು. ಪ್ರಥಮ ಪಿಯು ಎನ್.ಡಿ.ಎ ತರಗತಿಯ ವಿದ್ಯಾರ್ಥಿಗಳು ಶಿಸ್ತುಬದ್ಧ ಪಥ ಸಂಚಲನ ಮತ್ತು ಚೆಂಡೆ ವಾದ್ಯ ವಾಲಗ ಗಳ ಧ್ವನಿಯೊಂದಿಗೆ ಅತಿಥಿಗಳನ್ನು ವೇದಿಕೆಗೆ ಕರೆ ತರಲಾಯಿತು. ರೋವರ್ಸ್, ರೇಂಜರ್ಸ್, ಎನ್.ಡಿ.ಎ ತರಗತಿ ಮಕ್ಕಳ ಶಿಸ್ತು ಬದ್ಧ ಸಾಲುಗಳು ಆಕರ್ಷಿತವಾಗಿದ್ದವು. ದ್ವಿತೀಯ ಎನ್ ಡಿ ಎ ವಿದ್ಯಾರ್ಥಿಯಾದ ಸುಶಾಂತ್ ಗೌಡ ಅವರು ಕ್ಯಾಪ್ಟನ್ ಆಗಿ ಅತಿಥಿಗಳನ್ನು ಆಹ್ವಾನಿಸಿದರು. ಎಕ್ಸೆಲ್ ಪದವಿ ಪೂರ್ವ ಕಾಲೇಜು ವಿದ್ಯಾಸಾಗರ ಕ್ಯಾಂಪಸ್ ನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಅರೆಮಲೆ ಬೆಟ್ಟ ಕ್ಯಾಂಪಸ್ ನ ಪ್ರಾಂಶುಪಾಲರಾದ ಡಾ. ಪ್ರಜ್ವಲ್ ರವರು, ಬೋಧಕ ಬೋಧಕೇತರ ಸಿಬ್ಬಂದಿಯವರು, ಎಕ್ಸೆಲ್ ಟೆಕ್ನೋ ಸ್ಕೂಲ್ ನ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಹಿರಿಯ ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ. ಈ ಕಾರ್ಯಕ್ರಮಕ್ಕೆ ಮೆರುಗು ತುಂಬಿದರು.

ಮುಖ್ಯ ಅತಿಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರು ಸ್ಮರಣಿಕೆಯನ್ನು ನೀಡುವ ಮೂಲಕ ಅಭಿನಂದಿಸಿದರು. ಉಪನ್ಯಾಸಕರಾದ ಅರುಣ್ ಕ್ಯಾಸ್ತೊಲಿನೋ ಮತ್ತು ಜೀವನ್ ಪ್ರದೀಪ್ ಸ್ವಾಗತಿಸಿ, ನಿರೂಪಿಸಿ ವಂದಿಸಿದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿರ್ದೇಶಕರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಗುರುವಾಯನಕೆರೆ- ವೇಣೂರು ರಸ್ತೆಯ ಅಲ್ಲಲ್ಲಿ ಹೊಂಡಗಳು ಸೃಷ್ಟಿ, ವಾಹನ ಸವಾರರ ಪರದಾಟ

Suddi Udaya

ಮಾ 11: ಉಜಿರೆ ಬ್ರಹ್ಮಕಲಶೋತ್ಸವ: “ಧರ್ಮಯಾನ “ಐತಿಹಾಸಿಕ ಶೋಭಾಯಾತ್ರೆ-ಪ್ರಚಾರ ವಾಹನ ಅಭಿಯಾನಕ್ಕೆ ಚಾಲನೆ

Suddi Udaya

ಎಕ್ಸಲೆಂಟ್ ಸಂಸ್ಕೃತಿ ಸಂಭ್ರಮ-2026: ಪ್ರತಿಭೆಗೆ ವೇದಿಕೆ, ಸಂಸ್ಕಾರಕ್ಕೆ ಬೆಳಕು

Suddi Udaya

ಕೃಷಿಕ ಸವಣಾಲು ವಸಂತ ಪೂಜಾರಿ ನಿಧನ

Suddi Udaya

ಅಸಂಘಟಿತ ಕಾರ್ಮಿಕ ನಗರ ಸಮಿತಿ & ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ & ಕಾರ್ಯಕರ್ತರ ಸಮಲೋಚನೆ ಸಭೆ

Suddi Udaya
error: Content is protected !!