July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಸ.ಉ. ಪ್ರಾಥಮಿಕ ಶಾಲೆಗೆ ದಾನಿಗಳಿಂದ ಟೈ, ಬೆಲ್ಟ್, ಉಳಿತಾಯ ಖಾತಾ ಪುಸ್ತಕ ವಿತರಣೆ

ಕುತ್ಲೂರು: ಸ ಉ ಪ್ರಾ ಶಾಲೆ ಕುತ್ಲೂರು ಇಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಮಕ್ಕಳಿಗೆ ದಾನಿಗಳು ಕೊಡ ಮಾಡಿದ ಟೈ, ಬೆಲ್ಟ್ ಮತ್ತು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 1ನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿಗಳ ವತಿಯಿಂದ ರೂ 1000 ಮೊತ್ತವನ್ನು ಒಳಗೊಂಡ ಅಂಚೆ ಕಛೇರಿಯ ಪಾಸ್ ಪುಸ್ತಕ ನೀಡುವ ಯೋಜನೆ , ಬ್ಯಾಂಡ್ ಸೆಟ್ಟಿನ 15 ವಿದ್ಯಾರ್ಥಿಗಳಿಗೆ ಟೋಪಿ ವಿತರಣೆ, ಬಾಬುಶೆಟ್ಟಿ ನಿವೃತ್ತ ಕನ್ನಡ ಭಾಷಾ ಶಿಕ್ಷಕರು ವಿರಚಿತ 10 ಪುಸ್ತಕಗಳನ್ನು ಶಾಲೆಯ ಗ್ರಂಥಾಲಯ ಕ್ಕೆ ಕೊಡುಗೆಯಾಗಿ ನೀಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.,ಎಮ್.ಸಿ ಅಧ್ಯಕ್ಷ ಕನಕವರ್ಮ ಜೈನ್, ಭೋಜೇಗೌಡ ಪ್ರಗತಿಪರ ರೈತರು, ಅರ್ವ, ನಿರಂಜನ್ ನಿಕಟ ಪೂರ್ವ ಅಧ್ಯಕ್ಷರು ಲಯನ್ಸ್ ಕ್ಲಬ್ ವೇಣೂರು, ರಾಮಚಂದ್ರ ಭಟ್ ನಿಕಟ ಪೂರ್ವ ಅಧ್ಯಕ್ಷರು ಎಸ್.ಡಿ.ಎಮ್.ಸಿ, ನಿಮಿತ್ ಜೈನ್ ಅಧ್ಯಕ್ಷರು ಹಳೆ ವಿದ್ಯಾರ್ಥಿಗಳ ಸಂಘ, ನಾರಾವಿ ಗ್ರಾಮ ಪಂಚಾಯತ್ ಸದಸ್ಯ ಸಂತೋಷ ಮರ್ದೋಟ್ಟು ಹಾಗೂ ಸುದರ್ಶನ್ ಹೆಗ್ಡೆ , ಹಳೆ ವಿದ್ಯಾರ್ಥಿ ಯಾದ ಶಿವರಾಜ್ ಅಂಚನ್ , ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಶ್ರೀಮತಿ ಶ್ವೇತಾ ಜಗದೀಶ್, ಶ್ರೀ ಧ ಗ್ರಾ ಯೋಜನೆಯ ಸೇವಾ ಪ್ರತಿನಿಧಿ ಶ್ರೀಮತಿ ಉಷಾ ಸಂತೋಷ, ಪ್ರಧಾನ ಗುರುಗಳು, ಶಿಕ್ಷಕರು, ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಉಜಿರೆ:ಕಾಲಭೈರವ ಆರ್ಕೇಡ್ ನಲ್ಲಿ ಸಮೃದ್ದಿ ಟ್ರೇಡರ್ಸ್ ದಿನಸಿ ಮಳಿಗೆ ಶುಭಾರಂಭ

Suddi Udaya

ಬಂದಾರು : ಮುರ್ತಾಜೆ ಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್ ಲೈಟ್ ಉದ್ಘಾಟನೆ

Suddi Udaya

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಗೌಡ ಸಮಾಜ ಬಾಂಧವರು ಜಾತಿ ಕಾಲಂ ನಲ್ಲಿ ಒಕ್ಕಲಿಗ , ಉಪಜಾತಿಯ ಕಾಲಂ ನಲ್ಲಿ ಗೌಡ ಎಂದು ನಮೂದಿಸುವಂತೆ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್ ಪದ್ಮಗೌಡ ಹೇಳಿಕೆ

Suddi Udaya

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನೆ ಸಭೆ: ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಆಯ್ಕೆ

Suddi Udaya
error: Content is protected !!