September 6, 2026
ವರದಿ

ಗೇರುಕಟ್ಟೆ ಆಟೋ ರಿಕ್ಷಾ ಚಾಲಕ- ಮಾಲೀಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಗೇರುಕಟ್ಟೆ: ಆ.15. ಗೇರುಕಟ್ಟೆ ಆಟೋ ರಿಕ್ಷಾ ಚಾಲಕ- ಮಾಲೀಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಘದ 25 ನೇ ವರ್ಷವನ್ನು ಸಂಭ್ರಮದಿಂದ ಆಚರಿಸಲಾಯಿತು.
ಗೇರುಕಟ್ಟೆ ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಕೆ.
ಧ್ವಜಾರೋಹಣ ಮಾಡಿದರು.


ಸಂಘದ 25 ನೇ ವರ್ಷ ಪೂರೈಸಿದ ನೆನಪಿಗಾಗಿ ಗೇರುಕಟ್ಟೆ ಕೊರಂಜ ಸ.ಉ.ಹಿ.ಪ್ರಾ.ಶಾಲೆ ಹಾಗೂ ಗೇರುಕಟ್ಟೆ ಸರಕಾರಿ ಸಂಯುಕ್ತ ಫ್ರೌಡ ಶಾಲೆಗಳಿಗೆ ಆಫೀಸ್ ಟೇಬಲ್ ಮುಖ್ಯ ಶಿಕ್ಷಕರಿಗೆ ಹಸ್ತಾಂತರ ಮಾಡಿದರು.
ಸ್ಥಳೀಯ ಉದ್ಯಮಿ ಮನ್ಸೂರ್ ಗೇರುಕಟ್ಟೆ ಅವರನ್ನು ಸನ್ಮಾನಿಸಿ, ಗೌರವಿಸಿದರು.
ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು ಸಂದರ್ಭೋಚಿತವಾಗಿ ಮಾತನಾಡಿದರು.ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಂ, ಯಶೋಧರ ಶೆಟ್ಟಿ, ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ,ನಾಳ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಶರತ್ ಕುಮಾರ್ ಕೆ.,ಗೇರುಕಟ್ಟೆ ಫ್ರೌಡ ಶಾಲಾ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಗೋಪಾಲ ಗೌಡ ಯಂ.ಉಪಸ್ಥಿತರಿದ್ದರು.ಸಂಘದ ಉಪಾಧ್ಯಕ್ಷ ನಾಸಿರ್, ಕಾರ್ಯದರ್ಶಿ ಮೈಕೆಲ್ ಮೊಂತೇರೊ,ಜತೆ ಕಾರ್ಯದರ್ಶಿ ವಿನಯ,ಕೋಶಾಧಿಕಾರಿ ತಾರಾನಾಥ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಧ್ವಜರೋಹಣ ಸಂದರ್ಭದಲ್ಲಿ ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಗೇರುಕಟ್ಟೆ ಸಂಯುಕ್ತ ಫ್ರೌಡ ಶಾಲೆ ಹಾಗೂ ಮನ್ಷ್ಯ ರ್ ಶಾಲಾ ಮಕ್ಕಳು ಮುಖ್ಯ ಶಿಕ್ಷಕರು,ಸಹ ಶಿಕ್ಷಕರು ಪೋಷಕರು
ಉಪಸ್ಥಿತರಿದ್ದರು. ಅಂಚೆ ಇಲಾಖೆ ನಿವೃತ್ತ ಡಾಕಯ್ಯ ಗೌಡ ಹೆಚ್. ಕಾರ್ಯಕ್ರಮ ನಿರೂಪಣೆ ಮಾಡಿದರು. ಸಂಘದ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪದ್ಮನಾಭ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಮಚ್ಚಿನ: ವೀರಮ್ಮ ನಿಧನ

Suddi Udaya

ಮೊಗ್ರು: ಮುಗೇರಡ್ಕ ದೈವಸ್ಥಾನದ ವತಿಯಿಂದ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಶಿಶುಮಂದಿರಕ್ಕೆ ಸ್ಮಾರ್ಟ್ ಎಲ್.ಇ.ಡಿ ಟಿವಿ ಕೊಡುಗೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ದೇವದಾಸ್ ಶೆಟ್ಟಿ, ಕಾರ್ಯದರ್ಶಿ ಕಿರಣ್‌ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಅಮಿತಾನಂದ ಹೆಗ್ಡೆ

Suddi Udaya

ಫೆ.9-10: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ: ವಿವಿಧ ದೇಶ-ರಾಜ್ಯದಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಂಶೋಧಕರು, ವಿದ್ವಾಂಸರು ಭಾಗಿ

Suddi Udaya

ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ 17ನೇ ವಷ೯ದ ಪಟ್ಟಾಭಿಷೇಕ ವರ್ಧಂತಿ

Suddi Udaya
error: Content is protected !!