September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು, ನೇತ್ರಾವತಿ ವಲಯ ಪುತ್ತೂರು ಇದರ ಕ್ಷೀರ ಸಂಗಮ ಸಬಾಭವನ ಕಳಿಯ ಗೇರುಕಟ್ಟೆ ಶಾಖೆಯಲ್ಲಿ 79ನೇ ಸ್ವಾತಂತ್ರ್ಯ ದಿನೋತ್ಸವವನ್ನು ಭಾರತ ಮಾತಾ ಪೂಜನದೊಂದಿಗೆ ಯೋಗ ಬಂಧುಗಳು ಆಚರಿಸಿದರು.

ಕೇಂದ್ರದ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್, ಸತೀಶ್ ನಾಳ ನಿತ್ಯದ ಯೋಗ ಪ್ರಾತ್ಯಕ್ಷಿಕೆಯನ್ನು ನಿರ್ವಹಿಸಿ ಸ್ವಾತಂತ್ರೋತ್ಸವದ ಸಂದೇಶವನ್ನು ನೀಡಿದರು. ಸ್ವಾತಂತ್ರ್ಯ ಹೋರಾಟಗಾರರ ಮತ್ತು ದೇಶದ ಆಂತರಿಕ ಮತ್ತು ಬಾಹ್ಯ ರಕ್ಷಣೆಯಲ್ಲಿ ಸದಾ ನಿರತರಾದ ಯೋಧರನ್ನು ಸ್ಮರಿಸಿ ಗೌರವಿಸುವುದು, ದೇಶದ ಐಕ್ಯತೆಯನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದರು.

ಯೋಗ ಕೇಂದ್ರದ ವರದಿ ಪ್ರಮುಖ ಕೇಶವ,ಸಂಚಾಲಕ ವಿಜಯ, ಸಹ ಶಿಕ್ಷಕ ಸುಕೇಶ, ಅಶೋಕ, ವಸಂತ, ದಿವಾಕರ, ಗಣೇಶ, ಪದ್ಮಲತಾ, ಅರುಣ, ಭಾರತಿಯವರು ಭಾರತ ಮಾತಾ ಪೂಜನದಲ್ಲಿ ಭಾಗವಹಿಸಿದರು.

Related posts

ಬಾರ್ಯ- ಪುತ್ತಿಲ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Suddi Udaya

ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಅಧಾ ಆಚರಣೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಚಿದಾನಂದ ಪೂಜಾರಿ ಆಯ್ಕೆ

Suddi Udaya

ರಾಜ್ಯಕ್ಕೆ ಹಿರಿಮೆ ತಂದ ಎಕ್ಸೆಲ್ ಗುರುವಾಯನಕೆರೆಯ ನೀಟ್ ಫಲಿತಾಂಶ

Suddi Udaya
error: Content is protected !!