22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ರಾಜೇಶ್ ಕುರ್ಕಿಲ ನೆರವೇರಿಸಿ ಶುಭಹಾರೈಸಿದರು. ಬಳಿಕ ಬೆಳಾಲು ಪೇಟೆಯಲ್ಲಿ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದ ಜಯ ಘೋಷವನ್ನು ಹಾಕುತ್ತ ಮೆರವಣಿಗೆಯಲ್ಲಿ ಸಾಗಿದರು.

ಸಭಾ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಸ್ವಾತಂತ್ರ್ಯದ ಸವಾಲು ಮತ್ತು ಅದನ್ನು ಉಳಿಸಿ ಬೆಳೆಸಬೇಕಾದ ಅಗತ್ಯತೆಯ ಬಗೆಗೆ ಸಂದೇಶ ನೀಡಿದರು. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಏರ್ಪಡಿಸಲಾದ ಸ್ಪರ್ಧೆಗಳ ವಿಜೇತರ ಪಟ್ಟಿಯನ್ನು ಶಿಕ್ಷಕ ಕಿರಣ್ ವಾಚಿಸಿದರು.

ವಿದ್ಯಾರ್ಥಿನಿ ತ್ರಿಶಾ ಜೈನ್ ದೇಶಭಕ್ತಿ ಗೀತೆಯನ್ನು ಹಾಡಿದರು. ಸ್ವಾತಂತ್ರ್ಯೋತ್ಸವ ಮತ್ತು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿದ್ಯಾರ್ಥಿಗಳು ರಚಿಸಿದ ಭಿತ್ತಿ ಪತ್ರಿಕೆಯನ್ನು ಅನಾವರಣಗೊಳಿಸಲಾಯಿತು. ಶಿಕ್ಷಕ ಸುಮನ್ ಯು.ಎಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಸುರತ್ಕಲ್: ಶ್ರೀನಿವಾಸ ಆಸ್ಪತ್ರೆಯಲ್ಲಿ ಪತ್ರಕರ್ತರಿಗೆ ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ

Suddi Udaya

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಗುರುವಾಯನಕೆರೆ : ಯಡೂ೯ರು ಎಂಬಲ್ಲಿ ಮನೆಯೊಳಗಡೆ ಯುವಕ ಕವಚಿಬಿದ್ದ ಸ್ಥಿತಿಯಲ್ಲಿ ಪತ್ತೆ: ತಲೆಯ ಭಾಗದಿಂದ ನೆಲದಲ್ಲಿ ಹರಿದು ಹೋದ ನೆತ್ತರು

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ರಿಗೆ ಪಿಹೆಚ್.ಡಿ ಪದವಿ

Suddi Udaya

ಸುಲ್ಕೇರಿಮೊಗ್ರು ಹಿ.ಪ್ರಾ. ಶಾಲೆಯ ನೀರಿನ ನಳ್ಳಿಗಳನ್ನು ತುಂಡರಿಸಿದ ಕಿಡಿಗೇಡಿಗಳು

Suddi Udaya

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

Suddi Udaya
error: Content is protected !!