25.8 C
ಪುತ್ತೂರು, ಬೆಳ್ತಂಗಡಿ
March 6, 2026
ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ – ಉಪ್ಪಿನಂಗಡಿ ಅರಣ್ಯ ಉಪವಿಭಾಗದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಪ್ರಕರಣ, ಬೆಳೆ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಸಕ ಹರೀಶ್ ಪೂಂಜರಿಂದ ಪರಿಹಾರ ಮೊತ್ತದ ಚೆಕ್ ವಿತರಣೆ

ಬೆಳ್ತಂಗಡಿ ಅರಣ್ಯ ಉಪವಿಭಾಗ ಹಾಗೂ ಉಪ್ಪಿನಂಗಡಿ ಅರಣ್ಯ ವಿಭಾಗದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಹಾಗೂ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಸಕ ಹರೀಶ್ ಪೂಂಜ ಅವರು ಆ.15 ರಂದು ಬೆಳ್ತಂಗಡಿ ನಿರೀಕ್ಷಣಾ ಮಂದಿರದಲ್ಲಿ ಚೆಕ್ ಹಸ್ತಾಂತರಿಸಲಾಯಿತು.

ಕಳೆದ ಜುಲೈ ತಿಂಗಳಲ್ಲಿ ಕೊಕ್ಕಡದ ಸೌತಡ್ಕದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ, ಅವರ ಪತ್ನಿ ಸುಜಾತ ಅವರಿಗೆ 20 ಲಕ್ಷ ರೂ., ಬೆಳೆ ನಾಶ ಮಲವಂತಿಗೆ ಗ್ರಾಮದ ವಸಂತಿ ರೂ.81 ಸಾವಿರ, ಚಾರ್ಮಾಡಿ ಗ್ರಾಮದ ಕುಂಞ ಮಲೆಕುಡಿಯ ಅವರಿಗೆ 1.6, ಲಕ್ಷ ರೂ., ಧರ್ಮಸ್ಥಳ ಗ್ರಾಮದ ಬೋಳಿಯರು ಎಂಬಲ್ಲಿ ಆನೆ ದಾಳಿಯಿಂದ ಆಟೋ ರಿಕ್ಷಾ ನಜ್ಜುಗುಜ್ಜು ಗೊಂಡು ಹಾನಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇಶ್ ಅವರಿಗೆ ರೂ.20 ಸಾವಿರ ವಿತರಿಸಲಾಯಿತು.

ಈ ವೇಳೆ ಪುತ್ತೂರು ಉಪ ವಿಭಾಗ ಎಸಿಎಫ್ ಸುಬ್ಬಯ್ಯ ನಾಯ್ಕ್, ಮಂಗಳೂರು ಉಪ ವಿಭಾಗ ಎಸಿಎಫ್ ಶಿವಾನಂದ್ ವಿಭೂತೆ, ಉಪ್ಪಿನಂಗಡಿ ಆರ್.ಎಫ್.ಒ ರಾಘವೇಂದ್ರ ಹಾಗೂ ಬೆಳ್ತಂಗಡಿ ಆರ್.ಎಫ್.ಒ. ತ್ಯಾಗರಾಜ್ ಟಿ.ಎನ್. ಉಪಸ್ಥಿತರಿದ್ದರು.

Related posts

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya

ಸುಳ್ಳು ಸುದ್ದಿ ಪ್ರಸಾರ ಹಾಗೂ ಅವ್ಯಾಚ್ಯ ನಿಂದನೆ ದೂರು : ಸುವರ್ಣ ನ್ಯೂಸ್ ಆ್ಯಂಕರ್ ಹಾಗೂ ವರದಿಗಾರ, ಕ್ಯಾಮೆರಾಮ್ಯಾನ್ ವಿರುದ್ಧ ಪ್ರಕರಣ ದಾಖಲು

Suddi Udaya

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya

ಜ.4: ಮರೋಡಿ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಮ್ಮೇಳನ

Suddi Udaya

ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ

Suddi Udaya
error: Content is protected !!