23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ – ಉಪ್ಪಿನಂಗಡಿ ಅರಣ್ಯ ಉಪವಿಭಾಗದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಪ್ರಕರಣ, ಬೆಳೆ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಸಕ ಹರೀಶ್ ಪೂಂಜರಿಂದ ಪರಿಹಾರ ಮೊತ್ತದ ಚೆಕ್ ವಿತರಣೆ

ಬೆಳ್ತಂಗಡಿ ಅರಣ್ಯ ಉಪವಿಭಾಗ ಹಾಗೂ ಉಪ್ಪಿನಂಗಡಿ ಅರಣ್ಯ ವಿಭಾಗದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಹಾಗೂ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಸಕ ಹರೀಶ್ ಪೂಂಜ ಅವರು ಆ.15 ರಂದು ಬೆಳ್ತಂಗಡಿ ನಿರೀಕ್ಷಣಾ ಮಂದಿರದಲ್ಲಿ ಚೆಕ್ ಹಸ್ತಾಂತರಿಸಲಾಯಿತು.

ಕಳೆದ ಜುಲೈ ತಿಂಗಳಲ್ಲಿ ಕೊಕ್ಕಡದ ಸೌತಡ್ಕದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ, ಅವರ ಪತ್ನಿ ಸುಜಾತ ಅವರಿಗೆ 20 ಲಕ್ಷ ರೂ., ಬೆಳೆ ನಾಶ ಮಲವಂತಿಗೆ ಗ್ರಾಮದ ವಸಂತಿ ರೂ.81 ಸಾವಿರ, ಚಾರ್ಮಾಡಿ ಗ್ರಾಮದ ಕುಂಞ ಮಲೆಕುಡಿಯ ಅವರಿಗೆ 1.6, ಲಕ್ಷ ರೂ., ಧರ್ಮಸ್ಥಳ ಗ್ರಾಮದ ಬೋಳಿಯರು ಎಂಬಲ್ಲಿ ಆನೆ ದಾಳಿಯಿಂದ ಆಟೋ ರಿಕ್ಷಾ ನಜ್ಜುಗುಜ್ಜು ಗೊಂಡು ಹಾನಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇಶ್ ಅವರಿಗೆ ರೂ.20 ಸಾವಿರ ವಿತರಿಸಲಾಯಿತು.

ಈ ವೇಳೆ ಪುತ್ತೂರು ಉಪ ವಿಭಾಗ ಎಸಿಎಫ್ ಸುಬ್ಬಯ್ಯ ನಾಯ್ಕ್, ಮಂಗಳೂರು ಉಪ ವಿಭಾಗ ಎಸಿಎಫ್ ಶಿವಾನಂದ್ ವಿಭೂತೆ, ಉಪ್ಪಿನಂಗಡಿ ಆರ್.ಎಫ್.ಒ ರಾಘವೇಂದ್ರ ಹಾಗೂ ಬೆಳ್ತಂಗಡಿ ಆರ್.ಎಫ್.ಒ. ತ್ಯಾಗರಾಜ್ ಟಿ.ಎನ್. ಉಪಸ್ಥಿತರಿದ್ದರು.

Related posts

ಜೆಇಇ ಅಡ್ವಾನ್ಸ್ ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ, ರಾಷ್ಟ್ರ ಮಟ್ಟದಲ್ಲಿ 45 ನೆಯ ರ‍್ಯಾಂಕ್ ಪಡೆದ ವೀರಭದ್ರೇಶ್ ಕಟಗೇರಿ: ಗಗನ ಕುಸುಮವೆನಿಸಿದ ಐಐಟಿ ಪ್ರವೇಶಾತಿ ಎಕ್ಸೆಲ್ ನಿಂದ ಸುಲಭ ಸಾಧ್ಯ : ರಾಷ್ಟ್ರದ ಅತ್ಯಂತ ಕಠಿಣ ಪರೀಕ್ಷೆ ಎಕ್ಸೆಲ್ ವಿದ್ಯಾರ್ಥಿಗಳಿಗೆ ಸಲೀಸು

Suddi Udaya

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

Suddi Udaya

ನಾಳ ಭಜನಾ ಮಂಡಳಿ ಸದಸ್ಯರು ಅಯೋಧ್ಯೆ ಕ್ಷೇತ್ರಕ್ಕೆ ಭೇಟಿ

Suddi Udaya

ಜು.23 ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪ‌ರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್. ಸ್ಥಾಪನಾ ದಿನಾಚರಣೆ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಉಜಿರೆಯಲ್ಲಿ ಯಕ್ಷ ಸಂಭ್ರಮ

Suddi Udaya

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

Suddi Udaya
error: Content is protected !!