July 23, 2026
ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ – ಉಪ್ಪಿನಂಗಡಿ ಅರಣ್ಯ ಉಪವಿಭಾಗದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಪ್ರಕರಣ, ಬೆಳೆ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಸಕ ಹರೀಶ್ ಪೂಂಜರಿಂದ ಪರಿಹಾರ ಮೊತ್ತದ ಚೆಕ್ ವಿತರಣೆ

ಬೆಳ್ತಂಗಡಿ ಅರಣ್ಯ ಉಪವಿಭಾಗ ಹಾಗೂ ಉಪ್ಪಿನಂಗಡಿ ಅರಣ್ಯ ವಿಭಾಗದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಹಾಗೂ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಸಕ ಹರೀಶ್ ಪೂಂಜ ಅವರು ಆ.15 ರಂದು ಬೆಳ್ತಂಗಡಿ ನಿರೀಕ್ಷಣಾ ಮಂದಿರದಲ್ಲಿ ಚೆಕ್ ಹಸ್ತಾಂತರಿಸಲಾಯಿತು.

ಕಳೆದ ಜುಲೈ ತಿಂಗಳಲ್ಲಿ ಕೊಕ್ಕಡದ ಸೌತಡ್ಕದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ, ಅವರ ಪತ್ನಿ ಸುಜಾತ ಅವರಿಗೆ 20 ಲಕ್ಷ ರೂ., ಬೆಳೆ ನಾಶ ಮಲವಂತಿಗೆ ಗ್ರಾಮದ ವಸಂತಿ ರೂ.81 ಸಾವಿರ, ಚಾರ್ಮಾಡಿ ಗ್ರಾಮದ ಕುಂಞ ಮಲೆಕುಡಿಯ ಅವರಿಗೆ 1.6, ಲಕ್ಷ ರೂ., ಧರ್ಮಸ್ಥಳ ಗ್ರಾಮದ ಬೋಳಿಯರು ಎಂಬಲ್ಲಿ ಆನೆ ದಾಳಿಯಿಂದ ಆಟೋ ರಿಕ್ಷಾ ನಜ್ಜುಗುಜ್ಜು ಗೊಂಡು ಹಾನಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇಶ್ ಅವರಿಗೆ ರೂ.20 ಸಾವಿರ ವಿತರಿಸಲಾಯಿತು.

ಈ ವೇಳೆ ಪುತ್ತೂರು ಉಪ ವಿಭಾಗ ಎಸಿಎಫ್ ಸುಬ್ಬಯ್ಯ ನಾಯ್ಕ್, ಮಂಗಳೂರು ಉಪ ವಿಭಾಗ ಎಸಿಎಫ್ ಶಿವಾನಂದ್ ವಿಭೂತೆ, ಉಪ್ಪಿನಂಗಡಿ ಆರ್.ಎಫ್.ಒ ರಾಘವೇಂದ್ರ ಹಾಗೂ ಬೆಳ್ತಂಗಡಿ ಆರ್.ಎಫ್.ಒ. ತ್ಯಾಗರಾಜ್ ಟಿ.ಎನ್. ಉಪಸ್ಥಿತರಿದ್ದರು.

Related posts

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಕಪಾಟು ಕೊಡುಗೆ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಕರಂಬಾರು: ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ವಿಜಯದಶಮಿ‌ ಉತ್ಸವ

Suddi Udaya

ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಅಧ್ಯಾಪಕ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ನಿಧನ

Suddi Udaya
error: Content is protected !!