ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ: ಆಕರ್ಷಕ ಪಥಸಂಚಲನ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಮಟ್ಟದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ತಾಲೂಕು ಆಡಳಿತ ಸೌಧ ಆವರಣದಲ್ಲಿ ನಡೆಯಿತು.

ತಹಶೀಲ್ದಾರ್ ಪೃಥ್ವಿ ಸಾನಿಕಂ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ಬಳಿಕ ಧ್ವಜ ಗೀತೆ ವೇಳೆ ಮಳೆ ಸುರಿದರೂ ಅತಿಥಿಗಳು, ಆರಕ್ಷಕ ಹಾಗೂ ಗೃಹ ರಕ್ಷಕ ದಳ, ಎನ್ ಸಿಸಿ, ಸ್ಕೌಟ್ ಎಂಡ್ ಗೈಡ್ಸ್, ಬುಲ್ ಬುಲ್, ಬ್ಯಾಂಡ್ ಸೆಟ್ ಹಾಗೂ ವಿದ್ಯಾರ್ಥಿಗಳು ನಿಂತಲ್ಲೇ ನಿಂತು ಮಳೆಗೂ ಒದ್ದೆಯಾದರೂ ಲೆಕ್ಕಿಸದೆ ರಾಷ್ಟ್ರ ಪ್ರೇಮ ಮೆರೆದು ಧ್ವಜಕ್ಕೆ ಗೌರವ ಸೂಚಿಸಿದ್ದು ಗಮನ ಸೆಳೆಯಿತು. ಮಳೆಗೂ ವಿದ್ಯಾರ್ಥಿಗಳು ಘೋಷಣೆ ಕೂಗಿದರೂ.

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಕುಶಾಲಪ್ಪ ಎಸ್. ಪ್ರಧಾನ ಭಾಷಣ ಮಾಡಿದರು. ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಆರಕ್ಷಕ ಹಾಗೂ ಗೃಹ ರಕ್ಷಕ ದಳ, ಎನ್ ಸಿಸಿ, ಸ್ಕೌಟ್ಸ್ ಆ್ಯಡ್ ಗೈಡ್ಸ್, ಬುಲ್ ಬುಲ್, ಬ್ಯಾಂಡ್ ಸೆಟ್ ಮೂಲಕ ಆಕರ್ಷಕ ಪಥ ಸಂಚಲನ ನಡೆಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ್ ಎನ್. ಸ್ವಾಗತಿಸಿದರು. ಶಿಕ್ಷಣ ಇಲಾಖೆಯ ರಾಜೇಶ್ ನಿರೂಪಿಸಿದರು.

Related posts

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya

ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಎನ್ .ಎಸ್. ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ಪ್ರಮೋದ್ ಗೌಡ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿದ ಬಿಷಪ್ ಜೇಮ್ಸ್ ಪಟ್ಟೇರಿಯಲ್ ರವರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಗುರುವಾಯನಕೆರೆ ದೈವಾರಾಧಕರ ಮಹಾ ಸಮಾವೇಶದಲ್ಲಿ ಎಕ್ಸೆಲ್ ಕಲಾ ವೈಭವ

Suddi Udaya
error: Content is protected !!