25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ: ಆಕರ್ಷಕ ಪಥಸಂಚಲನ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಮಟ್ಟದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ತಾಲೂಕು ಆಡಳಿತ ಸೌಧ ಆವರಣದಲ್ಲಿ ನಡೆಯಿತು.

ತಹಶೀಲ್ದಾರ್ ಪೃಥ್ವಿ ಸಾನಿಕಂ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ಬಳಿಕ ಧ್ವಜ ಗೀತೆ ವೇಳೆ ಮಳೆ ಸುರಿದರೂ ಅತಿಥಿಗಳು, ಆರಕ್ಷಕ ಹಾಗೂ ಗೃಹ ರಕ್ಷಕ ದಳ, ಎನ್ ಸಿಸಿ, ಸ್ಕೌಟ್ ಎಂಡ್ ಗೈಡ್ಸ್, ಬುಲ್ ಬುಲ್, ಬ್ಯಾಂಡ್ ಸೆಟ್ ಹಾಗೂ ವಿದ್ಯಾರ್ಥಿಗಳು ನಿಂತಲ್ಲೇ ನಿಂತು ಮಳೆಗೂ ಒದ್ದೆಯಾದರೂ ಲೆಕ್ಕಿಸದೆ ರಾಷ್ಟ್ರ ಪ್ರೇಮ ಮೆರೆದು ಧ್ವಜಕ್ಕೆ ಗೌರವ ಸೂಚಿಸಿದ್ದು ಗಮನ ಸೆಳೆಯಿತು. ಮಳೆಗೂ ವಿದ್ಯಾರ್ಥಿಗಳು ಘೋಷಣೆ ಕೂಗಿದರೂ.

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಕುಶಾಲಪ್ಪ ಎಸ್. ಪ್ರಧಾನ ಭಾಷಣ ಮಾಡಿದರು. ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಆರಕ್ಷಕ ಹಾಗೂ ಗೃಹ ರಕ್ಷಕ ದಳ, ಎನ್ ಸಿಸಿ, ಸ್ಕೌಟ್ಸ್ ಆ್ಯಡ್ ಗೈಡ್ಸ್, ಬುಲ್ ಬುಲ್, ಬ್ಯಾಂಡ್ ಸೆಟ್ ಮೂಲಕ ಆಕರ್ಷಕ ಪಥ ಸಂಚಲನ ನಡೆಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ್ ಎನ್. ಸ್ವಾಗತಿಸಿದರು. ಶಿಕ್ಷಣ ಇಲಾಖೆಯ ರಾಜೇಶ್ ನಿರೂಪಿಸಿದರು.

Related posts

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮುಂಜಾಗೃತ ಮಾಹಿತಿ

Suddi Udaya

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಟೈಲರಿಂಗ್ ತರಬೇತಿ ಕಾರ್ಯಕ್ರಮ

Suddi Udaya

ಸುರತ್ಕಲ್ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಸಭಾಂಗಣದ ಲೋಕಾರ್ಪಣೆ

Suddi Udaya
error: Content is protected !!