July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಬಿದಿರೆ ಎಕ್ಸಲೆಂಟ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ


ಮೂಡುಬಿದಿರೆ : ಎಕ್ಸಲೆಂಟ್ ಸ್ವಾತಂತ್ರೋತ್ಸವ ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಶ್ರೀಧರ್ ಎಸ್ ಮುಂದುಮನಿ ಧ್ವಜಾರೋಹಣ ಮಾಡುವುದರೊಂದಿಗೆ ಆಚರಿಸಲಾಯಿತು.

ಬಳಿಕ ಮಾತನಾಡಿದ ಅವರು ಬದುಕಿನಲ್ಲಿ ಅನಿರೀಕ್ಷಿತಗಳು ಸಂಭವಿಸಿದಾಗ ಅದನ್ನು ಎದುರಿಸಿ ಈ ದೇಶದ ಘನತೆ ಗೌರವ ಕಾಪಾಡುವಲ್ಲಿ ನಾವು ಕಟಿಬದ್ಧರಾಗಬೇಕು ಎಂದರು. ಇದೇ ಸಂದರ್ಭದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಸಂಸ್ಥೆಯ ನೂತನ ಲಾಂಛನವನ್ನು ತಹಶೀಲ್ದಾರ್ ಬಿಡುಗಡೆಗೊಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಪ್ರತಿಕೂಲತೆಗಳ ನಡುವೆ ದೃಢ ಚಿತ್ತದಿಂದ ಬದುಕಿ ಗೆದ್ದು ನಾಡಿಗೆ, ದೇಶಕ್ಕೆ ಕೀರ್ತಿ ತರಬೇಕು ಎಂದರು.


ಸಂಸ್ಥೆಯ ಗೌರವಾಧ್ಯಕ್ಷ ಅಭಯಚಂದ್ರ ಜೈನ್ ದೇಶ ಭಾಷೆಗಳ ರಕ್ಷಣೆ ನಮ್ಮ ಕರ್ತವ್ಯ ಎಂದರು. ಎನ್‌ಸಿಸಿ ವಿದ್ಯಾರ್ಥಿಗಳು ಕವಾಯತಿನೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ವೇದಿಕೆಯಲ್ಲಿ ಎಕ್ಸಲೆಂಟ್ ಮೂಡುಬಿದಿರೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್, ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು.

ಸಂಸ್ಥೆಯ ಉಪನ್ಯಾಸಕಿ ಕು.ಪ್ರಿಯಾಂಕ ಸ್ವಾಗತಿಸಿ, ಡಾ. ಶೃತಿ ಅತಿಥಿಗಳನ್ನು ಪರಿಚಯಿಸಿದರು. ಕು. ಪ್ರಮೀಳಾ ಪಿಂಟೋ ವಂದಿಸಿದರು. ಉಪಮುಖ್ಯೋಪಾಧ್ಯಾಯ ಜಯಶೀಲ ಕಾರ್ಯಕ್ರಮ ನಿರೂಪಿಸಿದರು.

Related posts

ಅಗ್ರಿಲೀಫ್ ಸಂಸ್ಥೆಯಲ್ಲಿ ಅಪರಾಧ ತಡೆ ಮತ್ತು ಮಾದಕ ದ್ರವ್ಯಗಳ ವ್ಯಸನದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ: ಸುದ್ದಿ ಉದಯ ಪತ್ರಿಕೆ ನೀಡಿ ಸ್ವಾಗತ

Suddi Udaya

ಚಾರ್ಮಾಡಿ ಪ್ರದೇಶದಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಚಿರತೆಗಳು

Suddi Udaya

ಎಸ್.ಡಿ.ಎಂ ನಲ್ಲಿ ವಿಶ್ವ ಪರಿಸರ ದಿನಾಚರಣೆ, ಉಜಿರೆ ಪೇಟೆಯವರೆಗೆ ವಿದ್ಯಾರ್ಥಿಗಳಿಂದ ಪರಿಸರ ಜಾಥಾ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ: ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು

Suddi Udaya
error: Content is protected !!