25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಬಿದಿರೆ ಎಕ್ಸಲೆಂಟ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ


ಮೂಡುಬಿದಿರೆ : ಎಕ್ಸಲೆಂಟ್ ಸ್ವಾತಂತ್ರೋತ್ಸವ ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಶ್ರೀಧರ್ ಎಸ್ ಮುಂದುಮನಿ ಧ್ವಜಾರೋಹಣ ಮಾಡುವುದರೊಂದಿಗೆ ಆಚರಿಸಲಾಯಿತು.

ಬಳಿಕ ಮಾತನಾಡಿದ ಅವರು ಬದುಕಿನಲ್ಲಿ ಅನಿರೀಕ್ಷಿತಗಳು ಸಂಭವಿಸಿದಾಗ ಅದನ್ನು ಎದುರಿಸಿ ಈ ದೇಶದ ಘನತೆ ಗೌರವ ಕಾಪಾಡುವಲ್ಲಿ ನಾವು ಕಟಿಬದ್ಧರಾಗಬೇಕು ಎಂದರು. ಇದೇ ಸಂದರ್ಭದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಸಂಸ್ಥೆಯ ನೂತನ ಲಾಂಛನವನ್ನು ತಹಶೀಲ್ದಾರ್ ಬಿಡುಗಡೆಗೊಳಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಪ್ರತಿಕೂಲತೆಗಳ ನಡುವೆ ದೃಢ ಚಿತ್ತದಿಂದ ಬದುಕಿ ಗೆದ್ದು ನಾಡಿಗೆ, ದೇಶಕ್ಕೆ ಕೀರ್ತಿ ತರಬೇಕು ಎಂದರು.


ಸಂಸ್ಥೆಯ ಗೌರವಾಧ್ಯಕ್ಷ ಅಭಯಚಂದ್ರ ಜೈನ್ ದೇಶ ಭಾಷೆಗಳ ರಕ್ಷಣೆ ನಮ್ಮ ಕರ್ತವ್ಯ ಎಂದರು. ಎನ್‌ಸಿಸಿ ವಿದ್ಯಾರ್ಥಿಗಳು ಕವಾಯತಿನೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ವೇದಿಕೆಯಲ್ಲಿ ಎಕ್ಸಲೆಂಟ್ ಮೂಡುಬಿದಿರೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್, ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು.

ಸಂಸ್ಥೆಯ ಉಪನ್ಯಾಸಕಿ ಕು.ಪ್ರಿಯಾಂಕ ಸ್ವಾಗತಿಸಿ, ಡಾ. ಶೃತಿ ಅತಿಥಿಗಳನ್ನು ಪರಿಚಯಿಸಿದರು. ಕು. ಪ್ರಮೀಳಾ ಪಿಂಟೋ ವಂದಿಸಿದರು. ಉಪಮುಖ್ಯೋಪಾಧ್ಯಾಯ ಜಯಶೀಲ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿವಾದಿತ ವಕ್ಫ್ ಕಾಯಿದೆ ವಿರುದ್ಧ ತಾಲೂಕಿನಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ಮುಸ್ಲಿಮ್ ಮುಖಂಡರಿಂದ ನಿರ್ಧಾರ: ವಕ್ಫ್ ಸಂರಕ್ಷಣಾ ಹೋರಾಟ ಸಮಿತಿ ಅಸ್ಥಿತ್ವಕ್ಕೆ : ವೈ.ಸಿ.ಎಫ್. ನಿಂದ ಪೂರ್ವಭಾವಿ ಸಭೆ.

Suddi Udaya

ನಾವೂರುನಲ್ಲಿ ಬೃಹತ್ ಉಚಿತ ಕಣ್ಣಿನ ಹಾಗೂ ಹೃದಯ ತಪಾಸಣಾ ಶಿಬಿರ

Suddi Udaya

ಮೇ 11: ಎಕ್ಸೆಲ್ ಲಾಂಗ್ ಟರ್ಮ್ ನೀಟ್ ಕೋಚಿಂಗ್ ಪ್ರಾರಂಭ

Suddi Udaya
error: Content is protected !!