23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ನಗರ ಸಮಿತಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ನಗರ ಸಮಿತಿ ವತಿಯಿಂದ “ಮಹಿಳಾ ಭದ್ರತೆಯೇ ಸ್ವಾತಂತ್ರ್ಯದ ಅಳತೆಗೋಲು” ಎಂಬ ಧ್ಯೇಯ ವಾಕ್ಯದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಂಜಯ ನಗರ ಜಂಕ್ಷನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ವನ್ನು ಅಧ್ಯಕ್ಷರಾದ ರುಬಿಯಾ ಬಾನು ನೆರವೇರಿಸಿದರು

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷರಾದ ಶಮಾ ಉಜಿರೆ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉಪನ್ಯಾಸಕರಾದ ಶಶಿಕಲಾ ಸುರೇಶ್ ಸ್ವಾತಂತ್ರದ ಸಂದೇಶ ಭಾಷಣವನ್ನು ನೀಡಿದರು. ಅಡ್ವಕೇಟ್ ಅಸ್ಮಾ ರಿಝ್ವಾನ್, ಸಫ್ರಾ ಅನೀಶ್, ತಸ್ಲಿಮಾ ನವಾಝ್, ಉಪಸ್ಥಿತರಿದ್ದರು.

ಉಪನ್ಯಾಸಕರಾದ ಶಶಿಕಲಾ ಅವರನ್ನು ಸನ್ಮಾನಿಸಿ, ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಿಳೆಯರಿಗೆ ನಡೆದ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನಸೀಮಾ ಸ್ವಾಗತಿಸಿ, ಸುಝಾನ ವಂದಿಸಿದರು. ರಫಾ ಶಬೀರ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

Suddi Udaya

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

Suddi Udaya
error: Content is protected !!