September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ವೇಣೂರು:- ಇಲ್ಲಿನ ಎಕ್ಸೆಲ್ ಟೆಕ್ನೋ ಸ್ಕೂಲ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಸಂಸ್ಥೆಯ ವಿದ್ಯೋದಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ವಿದ್ಯೋದಯ ವಿದ್ಯಾ ಸಂಸ್ಥೆತ ಅಧ್ಯಕ್ಷ ಕೆ. ಶಿವರಾಮ ಹೆಗ್ಡೆ, ಎಕ್ಸೆಲ್ ಟೆಕ್ನೋ ಸ್ಕೂಲ್ ಇದರ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ಅವರ ತೀರ್ಥರೂಪರುಗಳಾದ ಸತೀಶ್ ಕುಮಾರ್ ಆರಿಗ ಮತ್ತು ಶುಭಲತಾ, ಪೆರ್ಮಾಣು ಗುತ್ತಿನ ಶ್ರೀ ಸುರೇಶ್ ಆರಿಗ, ಎಕ್ಸೆಲ್ ಟೆಕ್ನೋ ಸ್ಕೂಲ್ ಇದರ ಆಡಳಿತಾಧಿಕಾರಿ ಶಾಂತಿ ರಾಜ್ ಜೈನ್, ಶಾಲಾ ಮುಖ್ಯ ಶಿಕ್ಷಕಿ ಸುಜಾತಾ ಬಿ ಉಪಸ್ಥಿತರಿದ್ದು ಧ್ವಜಾರೋಹಣ ನೆರವೇರಿಸಿ ಸಂದರ್ಭೋಚಿತವಾಗಿ ಮಾತನಾಡಿದರು.

ಬಳಿಕ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ದಿಶ್ಯಾ ಎಸ್ ಶೆಟ್ಟಿ ಮತ್ತು ಪ್ರಣಾಮ್ ಸುವರ್ಣ ಇವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ನಡೆಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರಸಾದ್ ಮಾರ್ಗದರ್ಶನ ಮಾಡಿದರು. ಶಿಕ್ಷಕರುಗಳಾದ ಶ್ವೇತಾ ಎ. ಜೈನ್ ಸ್ವಾಗತಿಸಿ, ಪೂಜಿತಾ ಬಿ.ಕೆ ಮತ್ತು ಮಾಲತಿ ವಿಜೇತರ ಪಟ್ಟಿ ವಾಚಿಸಿ, ಸನ್ಮತಿ ಧನ್ಯವಾದವಿತ್ತು, ಕೃಷ್ಣಪ್ಪ ಎಂ‌.ಕೆ ನಿರೂಪಿಸಿ, ಅಕ್ಷತಾ ಹೆಗ್ಡೆ,ನಮನಾ, ತೀರ್ಥ ಪ್ರಸಾದ್, ವಿಂದ್ಯಾ ಮತ್ತು ಶಿಕ್ಷಕ‌ – ಶಿಕ್ಷೇತರ ಬಂಧುಗಳು‌ ಸಹಕರಿಸಿದರು.

Related posts

ಉಜಿರೆ ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ಭೇಟಿ: ಅಭಿವೃದ್ಧಿ ಹೊಂದುತ್ತಿರುವ ಶಾಲೆಯ ಬಗ್ಗೆ ಮೆಚ್ಚುಗೆ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಬಹುಮಾನ ವಿತರಣಾ ಕಾರ್ಯಕ್ರಮ – ” ಪುರಸ್ಕಾರ 2024 “

Suddi Udaya

ಶುಭವಿವಾಹ ಐಶ್ವರ್ಯ-ಸ್ಕಂದ

Suddi Udaya

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಿಜೆಪಿ ಶಾಸಕರ ಹೋರಾಟ ಯಶಸ್ವಿ -ಕಳೆಂಜ ದೇವಣ್ಣ ಗೌಡರ ಮನೆ ತೆರವು ಅರಣ್ಯ ಇಲಾಖೆಯ ಪ್ರಯತ್ನ ವಿಫಲ – ಜಂಟಿ ಸರ್ವೆಗೆ ಸಮ್ಮತಿ: ಸರ್ವೆ ನಡೆಸುವವರೆಗೆ ಯಥಾ ಸ್ಥಿತಿ ಮುಂದುವರಿಕೆ

Suddi Udaya

ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರ ದ ವತಿಯಿಂದ “ಕರ್ಣಾಂತರಂಗ” ಯಕ್ಷಗಾನ ಪ್ರಾತ್ಯಕ್ಷತೆ

Suddi Udaya
error: Content is protected !!