ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯು ಸಂಭ್ರದಿಂದ ನಡೆಯಿತು.
ಧ್ವಜಾರೋಹಣವನ್ನು ಉಪಪ್ರಾಂಶುಪಾಲರು ವೆಂಕಟೇಶ .ಎಸ್. ತುಳುಪುಳೆ ನೆರವೇರಿಸಿದರು. ನೂತನ ಪ್ರವೇಶ ದ್ವಾರದ ಉದ್ಘಾಟನೆಯನ್ನು ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಭಾಸ್ಕರ ಪೈ, ಹಾಗೂ ನೂತನ ದ್ವಜಸ್ತಂಭದ ಲೋಕಾರ್ಪಣೆ ಯನ್ನು ಎಸ್.ಡಿ.,ಎಮ್.ಸಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ನೆರವೇರಿಸಿದರು.
ಈ ಸಂದರ್ಭದಲ್ಲಿ ಕಾಲೇಜು ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











