23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಯೋನ್ ಆಶ್ರಮದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

ಗಂಡಿಬಾಗಿಲು : ಸಿಯೋನ್ ಆಶ್ರಮ ಟ್ರಸ್ಟ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಿಯೋನ್ ಆಶ್ರಮದ ಟ್ರಸ್ಟೀ ಸದಸ್ಯೆ ಶ್ರೀಮತಿ ಮೇರಿ ಯು.ಪಿ.ಯವರು ಸ್ವಾತಂತ್ರೋತ್ಸವದ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.

ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹುತಾತ್ಮರಿಗಾಗಿ ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟೀ ಡಾ. ಯು. ಸಿ. ಪೌಲೋಸ್ ರವರು ಸ್ವಾತಂತ್ರ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ – ಬಲಿದಾನವನ್ನು ಸ್ಮರಿಸಬೇಕು. ಅಹಿಂಸೆಯ ತತ್ವವನ್ನು ಮುನ್ನಡೆಸಿದ ಮಹಾತ್ಮಾ ಗಾಂಧೀಜಿಯವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಆಳವಡಿಸಿಕೊಂಡು ದೇಶಪ್ರೇಮ ಮೆರೆಯಬೇಕು. ಎಲ್ಲಾ ಧರ್ಮಿಯರ ಆಚಾರ-ವಿಚಾರಗಳಿಗೆ ಸಮಾನ ಗೌರವವಿದೆ. ದೇಶ ನನ್ನದೆನ್ನುವ ಭಾವನೆ ಜಾಗೃತವಾಗಬೇಕು. ಪರಸ್ಪರ ಪ್ರೀತಿ, ನಂಬಿಕೆಯಿಂದ ಒಗ್ಗಟ್ಟಿನಿಂದ ಬಾಳಬೇಕು ಎಂದರು. ಸಂಸ್ಥೆಯ ವೈದ್ಯಾಧಿಕಾರಿಯವರಾದ ಡಾ.ಶಿವಾನಂದ ಸ್ವಾಮಿಯವರು, ಬ್ರಿಟೀಷರಿಂದ ನಮಗೆ ಸ್ವಾತಂತ್ರ್ಯ ದೊರೆತ ಪರಿಯನ್ನು ಸಂಕ್ಷಿಪ್ತವಾಗಿ ವಿವರಿಸಿದರು. ಸಮಾಜದಲ್ಲಿ ಪ್ರಸ್ತುತ ನಡೆಯುತ್ತಿರುವ ಘಟನಾವಳಿಗಳನ್ನು ತಿಳಿಸುತ್ತಾ, ಇನ್ನು ಮುಂದೆ ನಾವು ಯಾವ ರೀತಿ ಐಕ್ಯತೆಯಿಂದ ಬಾಳಬೇಕು ಎಂಬುದರ ಬಗ್ಗೆ ಮನವರಿಕೆ ಮಾಡಿದರು. ನಾವೆಲ್ಲರೂ ಜವಾಬ್ದಾರಿಯುತ ನಾಗರಿಕರಾಗಿ, ಭಾರತದ ಅಭಿವೃದ್ಧಿಗಾಗಿ ಕರ್ತವ್ಯ ನಿರ್ವಹಿಸೋಣ ಎಂದರು.

ಸಂಸ್ಥೆಯ ಹಿತೈಷಿಗಳಾದ ಜೋಸೆಫ್ ಪಿ.ಪಿ.ಯವರು, ಸಂಸ್ಥೆಯ ಲೆಕ್ಕಾಧಿಕಾರಿ ಶ್ರೀಮತಿ ಸೌಮ್ಯ ಯು.ಪಿ.ಯವರು, ಸಿಯೋನ್ ಆಶ್ರಮದ ಎಲ್ಲಾ ಟ್ರಸ್ಟೀ ಸದಸ್ಯರುಗಳು, ಆಡಳಿತ ಮಂಡಳಿಯವರು, ಟ್ರಸ್ಟೀ ಕುಟುಂಬಸ್ಥರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು. ಶ್ರೀಮತಿ ದಿನವತಿಯವರು ಕಾರ್ಯಕ್ರಮ ನಿರೂಪಿಸಿದರು. ಆಶ್ರಮನಿವಾಸಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು.

Related posts

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆ

Suddi Udaya

ಅರುವ ಯಕ್ಷಗಾನ ತರಬೇತಿ ಕೇಂದ್ರ ಅಳದಂಗಡಿ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya

ಪಟ್ರಮೆಯಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya
error: Content is protected !!