23.5 C
ಪುತ್ತೂರು, ಬೆಳ್ತಂಗಡಿ
March 7, 2026
ಚಿತ್ರ ವರದಿವರದಿ

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ ಹಾಗೂ ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ಹೊಕ್ಕಡಿಗೋಳಿ ಇದರ ವತಿಯಿಂದ 79ನೇ ಸ್ವಾತಂತ್ರ್ಯ ದಿನಚರಣೆ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು. ಸಿರಾಜುಲ್ ಹುದಾ ಮದ್ರಸ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಮಾತ್ ಅಧ್ಯಕ್ಷರಾದ ಹೆಚ್ ಕೆ ಮುಹಮ್ಮದ್ ಶರೀಫ್ ರವರು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಜಮಾತ್ ಕಾರ್ಯದರ್ಶಿ ಫಾರೂಕ್ ಹೊಕ್ಕಾಡಿಗೋಳಿ ಸ್ವಾಗತ ಭಾಷಣ ಮಾಡಿದರು. ಮಸೀದಿ ಖದೀಬರಾದ ಮುಹಮ್ಮದ್ ನಿಯಾಝ್ ಫೈಝಿ ದುಹಾದೊಂದಿಗೆ ಸ್ವಾತಂತ್ರದ ಬಗ್ಗೆ ಶುಭ ಸಂದೇಶ ನೀಡಿದರು. ಗೌರವಧ್ಯಕ್ಷ ಹೆಚ್ ಮಹಮ್ಮದ್ ಇಕ್ಬಾಲ್ ಸ್ವಾತಂತ್ರ್ಯಹೋರಾಟದ ಬಗ್ಗೆ ವಿವರಿಸಿದರು. ಮದರಸ ಮಕ್ಕಳು ಹಾಗೂ ಜಮಾತ್ ಬಾಂಧವರಿಗೆ ಮಸೀದಿ ವಿದ್ಯಾರ್ಥಿ ರಿಹಾನ್ ಅಹಮದ್ ಭಾವ ಸ್ವಾತಂತ್ರ್ಯದ ಹಾಡು ಹಾಡಿದರು.

ಈ ಕಾರ್ಯಕ್ರಮದಲ್ಲಿ ಸಿರಾಜುಲ್ ಹುದಾ ಯಂಗ್ ಮೆನ್ಸ್ ಅಧ್ಯಕ್ಷ ಹೆಚ್ ಕೆ ಲತೀಫ್, ಆಡಳಿತ ಕಮಿಟಿ ಸದಸ್ಯರು, ಯಂಗ್ ಮೆನ್ಸ್ ಸದಸ್ಯರು, ಜಮಾತ್ ಬಾಂಧವರು ಮತ್ತು ಮದ್ರಸ ಮಕ್ಕಳು ಉಪಸ್ಥಿತರಿದ್ದರು. ಸಿರಜುಲ್ ಹುದಾ ಯಂಗ್ ಮೆನ್ಸ್ ಕಾರ್ಯದರ್ಶಿ ಎಚ್ ಐ ರಫೀಕ್ ಧನ್ಯವಾದ ಸಮರ್ಪಿಸಿದರು. ರಾಷ್ಟ್ರ ಗೀತೆ ಹಾಡಿ ಸಿಹಿ ತಿಂಡಿ ವಿತರಣೆ ಮಾಡಿದ ನಂತರ ಮೂರು ಸ್ವಲಾತಿನೊಂದಿಗೆ ಕಾರ್ಯಕ್ರಮವು ಮುಕ್ತಾಯವಾಯಿತು.

Related posts

ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಎಲ್ಲರಿಗೂ ಅಭಿನಂದನೆಗಳು – ಹರೀಶ್ ಪೂಂಜ

Suddi Udaya

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಕನ್ಯಾಡಿII ಸ.ಉ.ಹಿ.ಪ್ರಾ. ಶಾಲೆಗೆ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ಕಂಪನಿಯಿಂದ ಕಂಪ್ಯೂಟರ್ ಮತ್ತು ಕಂಪ್ಯೂಟರ್ ಟೇಬಲ್ ಕೊಡುಗೆ

Suddi Udaya

ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಬಳಂಜ ಶಾಲೆಗೆ ಹಳೆವಿದ್ಯಾರ್ಥಿಗಳಿಂದ ಎರಡು ಟಿವಿ ಕೊಡುಗೆ

Suddi Udaya
error: Content is protected !!