July 23, 2026
ಚಿತ್ರ ವರದಿವರದಿ

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ ಹಾಗೂ ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ಹೊಕ್ಕಡಿಗೋಳಿ ಇದರ ವತಿಯಿಂದ 79ನೇ ಸ್ವಾತಂತ್ರ್ಯ ದಿನಚರಣೆ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು. ಸಿರಾಜುಲ್ ಹುದಾ ಮದ್ರಸ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಮಾತ್ ಅಧ್ಯಕ್ಷರಾದ ಹೆಚ್ ಕೆ ಮುಹಮ್ಮದ್ ಶರೀಫ್ ರವರು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಜಮಾತ್ ಕಾರ್ಯದರ್ಶಿ ಫಾರೂಕ್ ಹೊಕ್ಕಾಡಿಗೋಳಿ ಸ್ವಾಗತ ಭಾಷಣ ಮಾಡಿದರು. ಮಸೀದಿ ಖದೀಬರಾದ ಮುಹಮ್ಮದ್ ನಿಯಾಝ್ ಫೈಝಿ ದುಹಾದೊಂದಿಗೆ ಸ್ವಾತಂತ್ರದ ಬಗ್ಗೆ ಶುಭ ಸಂದೇಶ ನೀಡಿದರು. ಗೌರವಧ್ಯಕ್ಷ ಹೆಚ್ ಮಹಮ್ಮದ್ ಇಕ್ಬಾಲ್ ಸ್ವಾತಂತ್ರ್ಯಹೋರಾಟದ ಬಗ್ಗೆ ವಿವರಿಸಿದರು. ಮದರಸ ಮಕ್ಕಳು ಹಾಗೂ ಜಮಾತ್ ಬಾಂಧವರಿಗೆ ಮಸೀದಿ ವಿದ್ಯಾರ್ಥಿ ರಿಹಾನ್ ಅಹಮದ್ ಭಾವ ಸ್ವಾತಂತ್ರ್ಯದ ಹಾಡು ಹಾಡಿದರು.

ಈ ಕಾರ್ಯಕ್ರಮದಲ್ಲಿ ಸಿರಾಜುಲ್ ಹುದಾ ಯಂಗ್ ಮೆನ್ಸ್ ಅಧ್ಯಕ್ಷ ಹೆಚ್ ಕೆ ಲತೀಫ್, ಆಡಳಿತ ಕಮಿಟಿ ಸದಸ್ಯರು, ಯಂಗ್ ಮೆನ್ಸ್ ಸದಸ್ಯರು, ಜಮಾತ್ ಬಾಂಧವರು ಮತ್ತು ಮದ್ರಸ ಮಕ್ಕಳು ಉಪಸ್ಥಿತರಿದ್ದರು. ಸಿರಜುಲ್ ಹುದಾ ಯಂಗ್ ಮೆನ್ಸ್ ಕಾರ್ಯದರ್ಶಿ ಎಚ್ ಐ ರಫೀಕ್ ಧನ್ಯವಾದ ಸಮರ್ಪಿಸಿದರು. ರಾಷ್ಟ್ರ ಗೀತೆ ಹಾಡಿ ಸಿಹಿ ತಿಂಡಿ ವಿತರಣೆ ಮಾಡಿದ ನಂತರ ಮೂರು ಸ್ವಲಾತಿನೊಂದಿಗೆ ಕಾರ್ಯಕ್ರಮವು ಮುಕ್ತಾಯವಾಯಿತು.

Related posts

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಲೆಮರೆಸಿಕೊಂಡಿದ್ದ ಪಡಂಗಡಿ ನೌಷದ್ ಹಾಗೂ ಮತ್ತೊರ್ವ ಆರೋಪಿ ಅಬ್ದುಲ್ ನಾಸಿರ್ ಬಂಧನ

Suddi Udaya

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

Suddi Udaya

ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಮನೋವಿಜ್ಞಾನ ಸಂಘ ಉದ್ಘಾಟನೆ

Suddi Udaya

ರಾಜ್ಯಮಟ್ಟದ ‘ಎಸ್.ಡಿ.ಎಂ ಉದ್ಯೋಗಂ – 2026’ ಗೆ ಚಾಲನೆ

Suddi Udaya

ವಿಶ್ವ ವೈದ್ಯರ ದಿನಾಚರಣೆ: ಉಪ್ಪಿನಂಗಡಿಯ ವೈದ್ಯರಿಗೆ ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!