25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಭಾರತದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕ್ರಿಶ್ಚಿಯನ್ ಬ್ರದರ್ಸ್ ಕಚೇರಿ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಲಾಯಿತು.

ಮಾಜಿ ಸೈನಿಕ ತೋಮಸ್ ಪಿ.ಜೆ. ಅವರು ಧ್ವಜಾರೋಹಣ ನೆರವೇರಿಸಿ ದೇಶಭಕ್ತಿಯ ಮಹತ್ವವನ್ನು ನೆನಪಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ಅಗಸ್ಟೀನ್ ಟಿ.ಎ. ಧನ್ಯವಾದಗಳನ್ನು ಸಲ್ಲಿಸಿದರು. ಕಾರ್ಯದರ್ಶಿ ಶಿಜೋ ಸ್ವಾಗತಿಸಿದರು. ಗೌರವಾಧ್ಯಕ್ಷರು ಸೆಬಾಸ್ಟಿಯನ್ ಪಿ.ಟಿ., ಗೌರವ ಸಲಹೆಗಾರರು ಜೋಸೆಫ್ ಕೆ.ಡಿ., ಉಪಾಧ್ಯಕ್ಷರು ಮ್ಯಾಥ್ಯೂ ವಿ.ಟಿ., ಕೋಶಾಧಿಕಾರಿ ರಂಜಿತ್ ಪಿ.ಎಸ್. ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಧ್ವಜಾರೋಹಣದ ನಂತರ ರಾಷ್ಟ್ರಗೀತೆಯನ್ನು ಹಾಡಿ ಸ್ವಾತಂತ್ರ್ಯದ ಶ್ರದ್ಧಾಸ್ಪದ ಕ್ಷಣವನ್ನು ಸ್ಮರಿಸಲಾಯಿತು. ಸೈನಿಕರ ತ್ಯಾಗವನ್ನು ನೆನೆದು, ಯುವಪೀಳಿಗೆ ರಾಷ್ಟ್ರಾಭಿಮಾನ ಮತ್ತು ಸೇವಾ ಮನೋಭಾವವನ್ನು ಉಳಿಸಿಕೊಳ್ಳಬೇಕು ಎಂಬ ಸಂದೇಶವನ್ನು ನೀಡಲಾಯಿತು.

Related posts

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯದ ತರಬೇತಿ ಕಾರ್ಯಾಗಾರ

Suddi Udaya

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

Suddi Udaya
error: Content is protected !!