September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಭಾರತದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕ್ರಿಶ್ಚಿಯನ್ ಬ್ರದರ್ಸ್ ಕಚೇರಿ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಲಾಯಿತು.

ಮಾಜಿ ಸೈನಿಕ ತೋಮಸ್ ಪಿ.ಜೆ. ಅವರು ಧ್ವಜಾರೋಹಣ ನೆರವೇರಿಸಿ ದೇಶಭಕ್ತಿಯ ಮಹತ್ವವನ್ನು ನೆನಪಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ಅಗಸ್ಟೀನ್ ಟಿ.ಎ. ಧನ್ಯವಾದಗಳನ್ನು ಸಲ್ಲಿಸಿದರು. ಕಾರ್ಯದರ್ಶಿ ಶಿಜೋ ಸ್ವಾಗತಿಸಿದರು. ಗೌರವಾಧ್ಯಕ್ಷರು ಸೆಬಾಸ್ಟಿಯನ್ ಪಿ.ಟಿ., ಗೌರವ ಸಲಹೆಗಾರರು ಜೋಸೆಫ್ ಕೆ.ಡಿ., ಉಪಾಧ್ಯಕ್ಷರು ಮ್ಯಾಥ್ಯೂ ವಿ.ಟಿ., ಕೋಶಾಧಿಕಾರಿ ರಂಜಿತ್ ಪಿ.ಎಸ್. ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಧ್ವಜಾರೋಹಣದ ನಂತರ ರಾಷ್ಟ್ರಗೀತೆಯನ್ನು ಹಾಡಿ ಸ್ವಾತಂತ್ರ್ಯದ ಶ್ರದ್ಧಾಸ್ಪದ ಕ್ಷಣವನ್ನು ಸ್ಮರಿಸಲಾಯಿತು. ಸೈನಿಕರ ತ್ಯಾಗವನ್ನು ನೆನೆದು, ಯುವಪೀಳಿಗೆ ರಾಷ್ಟ್ರಾಭಿಮಾನ ಮತ್ತು ಸೇವಾ ಮನೋಭಾವವನ್ನು ಉಳಿಸಿಕೊಳ್ಳಬೇಕು ಎಂಬ ಸಂದೇಶವನ್ನು ನೀಡಲಾಯಿತು.

Related posts

ಮಾ:29: ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ: ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಅಗ್ನಿಶಾಮಕ ವಾಹನ ಕೊಡುಗೆ

Suddi Udaya

ರಾಜ್ಯಮಟ್ಟದ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಚಾಂಪಿಯನ್ಸ್

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಅತ್ತೆ ಮೇಲೆ ಕತ್ತಿಯಿಂದ ಕಡಿದು ಕೊಲೆ ಯತ್ನ: ಆರೋಪಿ ಅಳಿಯನ ಬಂಧನ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

Suddi Udaya
error: Content is protected !!