25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಎಸ್‌ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಚಿಲಿಂಬಿ ಧ್ವಜಾರೋಹಣ ಮಾಡಿದರು.


ನಂತರ ಬ್ಯಾಂಡ್ ಸೆಟ್ ನೊಂದಿಗೆ ಪ್ರಭಾತ್ ಬೇರಿಯನ್ನು ಮಾಡಲಾಯಿತು. ಸಿರಾಜ್ ಎಂ ಚಿಲಿಂಬಿ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿಗಳಾಗಿ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾದ ಗಣೇಶ್, ಸದಸ್ಯರುಗಳಾದ ಶ್ರೀಮತಿ ಶಾಲಿನಿ, ಶ್ರೀಮತಿ ಅಮೀನಾ, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ಲಾವಣ್ಯ ಶೆಟ್ಟಿ ಅರ್ಕಜೆ, ದಾನಿಗಳಾದ ಶಂಸುಲ್ ಉಲಾಮಾ ಕ್ರಿಯಾ ಸಮಿತಿ ಮದ್ದಡ್ಕ ಇದರ ಗೌರವಾಧ್ಯಕ್ಷ ಎಂ ಎ ಅಬ್ದುಲ್ ಖಾದರ್, ಉಪಾಧ್ಯಕ್ಷರಾದ ರಿಜ್ವಾನ್, ಕೊಡುಗೆ ದಾನಿಗಳಾದ ಸಾಜಿದ್ ಮದ್ದಡ್ಕ, ಉಪೇಂದ್ರ ಆಚಾರ್ಯ, ಧನಂಜಯ ಕುಮಾರ್ ಆಲಂದಿಲ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್, ಶಾಲಾ ನಾಯಕಿ ರಾಯಿಶ, ಎಸ್ ಡಿ ಎಂ ಸಿ ಸದಸ್ಯರು, ಧ.ಗ್ರಾ.ಯೋ. ಸೇವಾನಿರತೆ ಶ್ರೀಮತಿ ಜಾನಕಿ ಎಸ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಚಂದ್ರಹಾಸ ಕೇದೆ ಮನೆ ಹಾಗೂ ಮುರಳಿಧರ ಕೇದಳಿಕೆ ಇವರು ನೀಡಿದ ಕಲಿಕೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೂತನ ಶಾಲಾ ವಿದ್ಯಾರ್ಥಿಗಳಿಗೆ ಐ.ಡಿ, ಟೈ, ಬೆಲ್ಟ್ ವಿತರಣೆ ಕಾರ್ಯಕ್ರಮ ಜರುಗಿತು. ಸಹ ಶಿಕ್ಷಕಿ ಶ್ರೀಮತಿ ಧವಲಾ ಎ ಕಾರ್ಯಕ್ರಮ ನಿರೂಪಿಸಿ , ಹಿರಿಯ ಶಿಕ್ಷಕಿ ಫಿಲೋಮಿನ ಲೋಬೋ ವಂದಿಸಿದರು‌. ಅಧ್ಯಾಪಕ ವೃಂದ ಸಹಕರಿಸಿದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಲ್ ಕೆಜಿ ಯ ಪ್ರಾರಂಭೋತ್ಸವ

Suddi Udaya

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

Suddi Udaya

ನಡ ಸ. ಪ. ಪೂ ಕಾಲೇಜಿನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಉದ್ಘಾಟನೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಕಾರಂದೂರು ಮನೆತನದ ಹಿರಿಯರು, ಪಡುಪಾಲ್ಟಾಲು ದಿ. ಪದ್ಮ ಪೂಜಾರಿಯವರ ಪತ್ನಿ ಶ್ರೀಮತಿ ಲಕ್ಷ್ಮೀ ನಿಧನ

Suddi Udaya
error: Content is protected !!