25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ 5 ಮಂದಿ ಕೃಷಿಕರಿಗೆ ಅತ್ಯುತ್ತಮ ಸಾವಯವ ಪ್ರೋತ್ಸಾಹ ರೈತ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ಸಾವಯವ ಕೃಷಿ ಯೋಜನೆ, ಮಂಗಳ ಕಿಸಾನ್ ಸಮೃದ್ಧಿ ವಿಭಾಗ ಬಿ.ಸಿ ರೋಡ್ ಬಂಟ್ವಾಳ ಇವರು ಕೊಡ ಮಾಡುವ ಅತ್ಯುತ್ತಮ ಸಾವಯವ ಕೃಷಿ ರೈತ ಪ್ರಶಸ್ತಿ ಪ್ರೋತ್ಸಾಹಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಪ್ರಗತಿಪರ ಕೃಷಿಕರಾದ ನಡ ಗ್ರಾಮದ ಕೃಷ್ಣಪ್ಪ ಪೂಜಾರಿ, ಬಳಂಜ ಗ್ರಾಮದ ರಮಾನಾಥ ಶೆಟ್ಟಿ,ನಾವರ ಗ್ರಾಮದ ನವೀನ್ ಪೂಜಾರಿ, ಕಣಿಯೂರು ಗ್ರಾಮದ ಅಜಿತ್ ಜೈನ್ ಹಾಗೂ ಇಳಂತಿಲ ಗ್ರಾಮದ ತಿಮ್ಮಪ್ಪ ಗೌಡ ಅವರು ಆಯ್ಕೆಗೊಂಡು ಆ. 10 ರಂದು ಬಿ.ಸಿ ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಮಾನಾಥ ರೈಯವರಿಂದ ಪ್ರಶಸ್ತಿ ಪಡೆದು ಸನ್ಮಾನ ಸ್ವೀಕರಿಸಿದರು.


ಇವರು ಮಂಗಳ ಮತ್ತು ಸನ್ಮಾನ ‘ಕಿಸಾನ್ ಸಮೃದ್ಧಿ ಸಾವಯವ ಗೊಬ್ಬರವನ್ನು ತಮ್ಮ ಅಡಿಕೆ, ತೆಂಗು, ಕಾಳು ಮೆಣಸು, ಮತ್ತು ತರಕಾರಿ ಬೆಳೆಗಳಿಗೆ ಕಳೆದ 9 ವರ್ಷಗಳಿಂದ ಸತತವಾಗಿ ಬಳಕೆ ಮಾಡುವ ಮೂಲಕ ಉತ್ತಮ ಇಳುವರಿ ಪಡೆದ ಸಂತೃಪ್ತ ಬಳಕೆದಾರರಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕ ಮೋಹನ್ ಗೌಡ, ಅಶ್ವಿನಿ ಮೋಹನ್ ಗೌಡ, ಹಿರಿಯ ಅಧಿಕಾರಿ ಭಾರತಿ ರೈ,ದ.ಕ ಜಿಲ್ಲಾ, ಉಡುಪಿ, ಕಾಸರಗೋಡು, ಬೆಳ್ತಂಗಡಿ ಭಾಗಗಳಿಂದ, ಉದ್ಯೋಗಿಗಳು, ಬಳಕೆದಾರರು ಉಪಸ್ಥಿತರಿದ್ದರು.

Related posts

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya

ಪಿಲಿಗೂಡು ಶಾಲಾ ವಾರ್ಷಿಕೋತ್ಸವ, ವಿವೇಕ ಕೊಠಡಿ ಮತ್ತು ರಂಗಮಂದಿರ ಉದ್ಘಾಟನೆ

Suddi Udaya

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ಮಾಲಾಡಿ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya
error: Content is protected !!