September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ 5 ಮಂದಿ ಕೃಷಿಕರಿಗೆ ಅತ್ಯುತ್ತಮ ಸಾವಯವ ಪ್ರೋತ್ಸಾಹ ರೈತ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ಸಾವಯವ ಕೃಷಿ ಯೋಜನೆ, ಮಂಗಳ ಕಿಸಾನ್ ಸಮೃದ್ಧಿ ವಿಭಾಗ ಬಿ.ಸಿ ರೋಡ್ ಬಂಟ್ವಾಳ ಇವರು ಕೊಡ ಮಾಡುವ ಅತ್ಯುತ್ತಮ ಸಾವಯವ ಕೃಷಿ ರೈತ ಪ್ರಶಸ್ತಿ ಪ್ರೋತ್ಸಾಹಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಪ್ರಗತಿಪರ ಕೃಷಿಕರಾದ ನಡ ಗ್ರಾಮದ ಕೃಷ್ಣಪ್ಪ ಪೂಜಾರಿ, ಬಳಂಜ ಗ್ರಾಮದ ರಮಾನಾಥ ಶೆಟ್ಟಿ,ನಾವರ ಗ್ರಾಮದ ನವೀನ್ ಪೂಜಾರಿ, ಕಣಿಯೂರು ಗ್ರಾಮದ ಅಜಿತ್ ಜೈನ್ ಹಾಗೂ ಇಳಂತಿಲ ಗ್ರಾಮದ ತಿಮ್ಮಪ್ಪ ಗೌಡ ಅವರು ಆಯ್ಕೆಗೊಂಡು ಆ. 10 ರಂದು ಬಿ.ಸಿ ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಮಾನಾಥ ರೈಯವರಿಂದ ಪ್ರಶಸ್ತಿ ಪಡೆದು ಸನ್ಮಾನ ಸ್ವೀಕರಿಸಿದರು.


ಇವರು ಮಂಗಳ ಮತ್ತು ಸನ್ಮಾನ ‘ಕಿಸಾನ್ ಸಮೃದ್ಧಿ ಸಾವಯವ ಗೊಬ್ಬರವನ್ನು ತಮ್ಮ ಅಡಿಕೆ, ತೆಂಗು, ಕಾಳು ಮೆಣಸು, ಮತ್ತು ತರಕಾರಿ ಬೆಳೆಗಳಿಗೆ ಕಳೆದ 9 ವರ್ಷಗಳಿಂದ ಸತತವಾಗಿ ಬಳಕೆ ಮಾಡುವ ಮೂಲಕ ಉತ್ತಮ ಇಳುವರಿ ಪಡೆದ ಸಂತೃಪ್ತ ಬಳಕೆದಾರರಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕ ಮೋಹನ್ ಗೌಡ, ಅಶ್ವಿನಿ ಮೋಹನ್ ಗೌಡ, ಹಿರಿಯ ಅಧಿಕಾರಿ ಭಾರತಿ ರೈ,ದ.ಕ ಜಿಲ್ಲಾ, ಉಡುಪಿ, ಕಾಸರಗೋಡು, ಬೆಳ್ತಂಗಡಿ ಭಾಗಗಳಿಂದ, ಉದ್ಯೋಗಿಗಳು, ಬಳಕೆದಾರರು ಉಪಸ್ಥಿತರಿದ್ದರು.

Related posts

ನಾರಾವಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ರಾಜವರ್ಮ ಜೈನ್, ಉಪಾಧ್ಯಕ್ಷರಾಗಿ ಸುಮಿತ್ರಾ ಅವಿರೋಧವಾಗಿ ಆಯ್ಕೆ

Suddi Udaya

ಫೆ.1-2: ಚಿಬಿದ್ರೆ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಡಿ.ಟಿ.ಪಿ ಮತ್ತು ಮಹಿಳಾ ಟೈಲರಿಂಗ್ ತರಬೇತಿಯ ಸಮಾರೋಪ

Suddi Udaya

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!