July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಲಯನ್ಸ್ ಕ್ಲಬ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಲಯನ್ಸ್ ಭವನದಲ್ಲಿ ಆಚರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ನ ಅಧ್ಯಕ್ಷ ಲಯನ್ ಮುರಳಿ ಬಲಿಪ ಇವರು ವಹಿಸಿಕೊಂಡರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ತಹಶೀಲ್ದಾರ್ ಪೃಥ್ವಿ ಸಾನಿಕಂ ಭಾಗವಹಿಸಿ ರಾಷ್ಟ್ರಸೇವೆಗಾಗಿ ನಾವು ಸದಾ ಸಿದ್ಧರಿರೋಣ ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಕರ್ತವ್ಯವನ್ನು ನಿರ್ವಹಿಸಿ ನಿವೃತ್ತರಾದ ಲಯನ್ ಎ. ಕೆ ಶಿವನ್ ಹಾಗೂ ಲಯನ್ ಗೋಪಾಲಕೃಷ್ಣ ಕಾಂಚೋಡು ಇವರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಮಾಜಿ ಯೋಧರಾದ ಲಯನ್ ಮೋಹನ ಎಚ್.ಕೆ ಉಪಸ್ಥಿತರಿದ್ದರು.

ಪೂರ್ವ ಪ್ರಾಂತ್ಯ ಅಧ್ಯಕ್ಷ ಲಯನ್ ಧರಣೇಂದ್ರ ಕೆ ಜೈನ್ ಸ್ವಾಗತಿಸಿದರು. ಪೂರ್ವ ಪ್ರಾಂತ್ಯ ಅಧ್ಯಕ್ಷ ಲಯನ್ ವಸಂತ ಶೆಟ್ಟಿ ಶ್ರದ್ಧಾ ಮುಖ್ಯ ಅತಿಥಿಗಳ ಪರಿಚಯವನ್ನು ಮಾಡಿದರು. ಕೋಶಾಧಿಕಾರಿ ಲಯನ್ ಸುಭಾಷಿಣಿ ಧನ್ಯವಾದ ಸಲ್ಲಿಸಿದರು. ಕಾರ್ಯದರ್ಶಿ ಲಯನ್ ಅಮಿತಾನಂದ ಹೆಗ್ಡೆ ಇವರು ಮುಂದಿನ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಲಯನ್ ಕೃಷ್ಣ ಕೆ ಆಚಾರ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಲಿಯೋ ಕ್ಲಬ್ ನ ಅಧ್ಯಕ್ಷ ಲಿಯೋ ಭಾಷಿಣಿ ಉಪಸ್ಥಿತರಿದ್ದರು. ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya

ಪುತ್ತಿಲ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ಡಾ. ಯು.ಸಿ. ಪೌಲೋಸ್‌ರವರ ಸೇವೆಗೆ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಭೇಟಿ

Suddi Udaya
error: Content is protected !!