38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಭಾರತದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕ್ರಿಶ್ಚಿಯನ್ ಬ್ರದರ್ಸ್ ಕಚೇರಿ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಲಾಯಿತು.

ಮಾಜಿ ಸೈನಿಕ ತೋಮಸ್ ಪಿ.ಜೆ. ಅವರು ಧ್ವಜಾರೋಹಣ ನೆರವೇರಿಸಿ ದೇಶಭಕ್ತಿಯ ಮಹತ್ವವನ್ನು ನೆನಪಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ಅಗಸ್ಟೀನ್ ಟಿ.ಎ. ಧನ್ಯವಾದಗಳನ್ನು ಸಲ್ಲಿಸಿದರು. ಕಾರ್ಯದರ್ಶಿ ಶಿಜೋ ಸ್ವಾಗತಿಸಿದರು. ಗೌರವಾಧ್ಯಕ್ಷರು ಸೆಬಾಸ್ಟಿಯನ್ ಪಿ.ಟಿ., ಗೌರವ ಸಲಹೆಗಾರರು ಜೋಸೆಫ್ ಕೆ.ಡಿ., ಉಪಾಧ್ಯಕ್ಷರು ಮ್ಯಾಥ್ಯೂ ವಿ.ಟಿ., ಕೋಶಾಧಿಕಾರಿ ರಂಜಿತ್ ಪಿ.ಎಸ್. ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಧ್ವಜಾರೋಹಣದ ನಂತರ ರಾಷ್ಟ್ರಗೀತೆಯನ್ನು ಹಾಡಿ ಸ್ವಾತಂತ್ರ್ಯದ ಶ್ರದ್ಧಾಸ್ಪದ ಕ್ಷಣವನ್ನು ಸ್ಮರಿಸಲಾಯಿತು. ಸೈನಿಕರ ತ್ಯಾಗವನ್ನು ನೆನೆದು, ಯುವಪೀಳಿಗೆ ರಾಷ್ಟ್ರಾಭಿಮಾನ ಮತ್ತು ಸೇವಾ ಮನೋಭಾವವನ್ನು ಉಳಿಸಿಕೊಳ್ಳಬೇಕು ಎಂಬ ಸಂದೇಶವನ್ನು ನೀಡಲಾಯಿತು.

Related posts

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

Suddi Udaya

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

Suddi Udaya
error: Content is protected !!