September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಪಿನಡ್ಕದಲ್ಲಿ ಗೆಳೆಯರ ಬಳಗದಿಂದ ಶ್ರೀ ಕೃಷ್ಣಾಷ್ಟಮಿ‌ ಸಂಭ್ರಮ : ಸಾಧಕರಿಗೆ ಸನ್ಮಾನ, ಶಾಲೆಗೆ ಗೊದ್ರೇಜ್ ಹಸ್ತಾಂತರ, ಕ್ರೀಡಾಕೂಟ

ಕಾಪಿನಡ್ಕ: ಗಳೆಯರ ಬಳಗದ ವತಿಯಿಂದ, ಶ್ರೀ ಹರಿ ಭಜನಾ ಮಂಡಳಿಯ ಸಹಕಾರದಿಂದ ಕಾಪಿನಡ್ಕದಲ್ಲಿ ಶ್ರೀ ಕೃಷ್ಣಾಷ್ಠಮಿ ಸಂಭ್ರಮವು ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಗೆಳೆಯರ ಬಳಗದ ಗೌರವಾಧ್ಯಕ್ಷ ಕೆ.ವಸಂತ ಸಾಲಿಯಾನ್ ವಹಿಸಿದ್ದರು.

ಎಸ್.ಎಸ್.ಎಲ್.ಸಿ ಯಲ್ಲಿ ಸಾಧನೆ ಮಾಡಿದ ಸಾಧಕರಾದ ಸನ್ನಿಧಿ ಎಸ್ ಹೆಗ್ಡೆ,ಶರಣ್ಯ ಹೆಗ್ಡೆ,ಜೆಇಇ ಅಡ್ವಾನ್ಸ್ ಸಾಧಕ ಅಚಿಂತ್ಯ ದಾಸ್ ಪರವಾಗಿ ಅವರ ತಂದೆ ಮೋಹನ್ ದಾಸ್,ಆಶಾ ಕಾರ್ಯಕರ್ತೆ ಗುಲಾಬಿ ಅವರನ್ನು ಸನ್ಮಾನಿಸಲಾಯಿತು.

ಸಾಯಿರಾಮ್ ಫ್ರೆಂಡ್ಸ್ ತಂಡದ ಪ್ರಮುಖರು,ಕುವೆಟ್ಟು ಗ್ರಾ.ಪಂ ಮಾಜಿ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ ಅವರು ಕಾಪಿನಡ್ಕ ಶಾಲೆಗೆ ಗೊದ್ರೇಜನ್ನು ಕೊಡುಗೆಯಾಗಿ ನೀಡಿದರು.

ವೇದಿಕೆಯಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಯುವ ಉದ್ಯಮಿ ರಾಘವೇಂದ್ರ ಪ್ರಸಾದ್,ಕುವೆಟ್ಟು ಗ್ರಾ.ಪಂ ಮಾಜಿ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ,ಉದ್ಯಮಿ ಸಂತೋಷ್ ಹೆಗ್ಡೆ ಮಾರುತಿ ನಿಲಯ, ಬಳಂಜ ಉಮಾಮಹೇಶ್ವರ ಯುವಕ ಮಂಡಳ ಅಧ್ಯಕ್ಷ ಸುಕೇಶ್ ಕುಮಾರ್, ಪ್ರಗತಿಪರ ಕೃಷಿಕ ಜಗದೀಶ್ ರೈ ಹಾನಿಂಜ, ಅಳದಂಗಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಮೋಹನ್ ದಾಸ್, ಬಳಂಜ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹೇಮಂತ್ ಕಟ್ಟೆ,ಬಳಂಜ ಮಹಿಳಾ ಬಿಲ್ಲವ ವೇದಿಕೆ‌ ಅಧ್ಯಕ್ಷೆ ಭಾರತಿ ಸಂತೋಷ್, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಮಾಲಾ ಎಂ.ಕೆ,ಗೆಳೆಯರ ಬಳಗದ ಅಧ್ಯಕ್ಷ ಲತೇಶ್ ಎ.ಆರ್, ಶಾಲಾ ಮುಖ್ಯೋಪಾಧ್ಯಾಯಿನಿ ಶಾಂತಿವಾಸ್, ಎಸ್.ಡಿ.ಎಂ.ಸಿ ಸುರೇಶ್ ಪೂಜಾರಿ, ದೇವರಾಜ್ ಅತ್ಯರಂಡ ,ಯತೀನ್, ಆದಿ ,ಸಿರಾಜ್, ಪ್ರದೀಪ್ ಮೈಂದಕುಮೇರ್ ಉಪಸ್ಥಿತರಿದ್ದರು.

ಗೆಳೆಯರ ಬಳಗದ ಪ್ರಮುಖರಾದ ಸಂತೋಷ್ ಕುಮಾರ್ ಕಾಪಿನಡ್ಕ ಸ್ವಾಗತಿಸಿದರು, ಇಂದು ಶೇಖರ್ ನಿರೂಪಿಸಿದರು. ಗೆಳೆಯರ ಬಳಗದ ಸದಸ್ಯರು ಸಹಕರಿಸಿದರು.

Related posts

ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರಿಗೆ “ಹವ್ಯಕ ವೇದ ರತ್ನ” ಪ್ರಶಸ್ತಿ ಪ್ರದಾನ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya

ಉರುವಾಲು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿತುಳು ನಾಡು-ನುಡಿ-ಸಂಸ್ಕೃತಿ ಒರಿಪಾವುನ ಬುಳೆಪಾವುನ ಮಾರ್ಗೋಪಾಯೊಲು” ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya
error: Content is protected !!