27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಪ್ಪೆಟ್ಟಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ನೂತನ ಶೌಚಾಲಯದ ಉದ್ಘಾಟನೆ

ಕುಪ್ಪೆಟ್ಟಿ: ಸ.ಉ.ಹಿ.ಪ್ರಾ.ಶಾಲೆ ಕುಪ್ಪೆಟ್ಟಿಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ನೂತನ ಶೌಚಾಲಯದ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಎಸ್ ಡಿ ಎಂ ಸಿ ಅಧ್ಯಕ್ಷ ಅಶ್ರಫ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ನಾಯ್ಕ ರವರು ನೂತನ ಶೌಚಾಲಯದ ಉದ್ಘಾಟನೆಯನ್ನು ಮಾಡಿದರು. ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಎಸ್ ಡಿ ಎಂ ಸಿ ಸದಸ್ಯರು ಪೋಷಕರು ಹಿರಿಯ ವಿದ್ಯಾರ್ಥಿಗಳು ಊರ ಮಹನೀಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಬಳಿಕ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಅಶ್ರಫ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ನಾಯ್ಕ ರವರು ಶುಭವನ್ನು ಹಾರೈಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವನಿತಾ ಸ್ವಾಗತಿಸಿದರು. ಟಿಜಿಟಿ ಶಿಕ್ಷಕಿ ಶ್ರೀಮತಿ ರಶ್ಮಿ ಬಿ ಯವರು ದಿನಾಚರಣೆಯ ಮಹತ್ವದ ಕುರಿತು ಭಾಷಣ ಮಾಡಿದರು.

ವಿದ್ಯಾರ್ಥಿಗಳಾದ ಫಾತಿಮಾ ಶಾನಿಷ್ಮ, ಸುಂದುಸ್ ಹರ್ಲಿನ್, ಫಾತಿಮಾತ್ ಸ್ವಪ, ರಿದಾರವರು ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಶಾಲೆಗೆ ಸೌಂಡ್ ಸಿಸ್ಟಮ್ ಅನ್ನು ಕೊಡುಗೆಯಾಗಿ ನೀಡಿದ ಅಶ್ರಫ್ ಮತ್ತು ಶ್ರೀಮತಿ ಶೋಭಾ , ನೂತನ ಶೌಚಾಲಯಕ್ಕೆ ಬಾಗಿಲಿನ ವ್ಯವಸ್ಥೆಯನ್ನು ಒದಗಿಸಿಕೊಟ್ಟ ಅಶ್ರಫ್ ಬಾಯ್ತರ್ ರವರಿಗೆ ಗೌರವಾರ್ಪಣೆ ಮಾಡಲಾಯಿತು.

ಶಿಕ್ಷಕಿ ಶ್ರೀಮತಿ ಶಬನ ಬಾನು ರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಸಹ ಶಿಕ್ಷಕಿ ಶ್ರೀಮತಿ ವಿನುತಾ ಎಸ್ ಸಾಲಿಯಾನ್ ರವರು ಧನ್ಯವಾದ ಸಮರ್ಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.ಶಿಕ್ಷಕಿಯರಾದ ಪದ್ಮಾವತಿ, ರಾಧಾಬಾಯಿ,ವನಿತಾ, ಪೂರ್ಣಿಮಾ,ಲಿಖಿತಾರವರು ಸಹಕರಿಸಿದರು.

Related posts

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya

ಬಂಗಾಡಿ ಕುಕ್ಕಾವು ನಿವಾಸಿ ಜಯಂತ್ ಕುಲಾಲ್ ನಿಧನ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ: ಅಧ್ಯಕ್ಷರಾಗಿ ಶಶಿಧರ ಶೆಟ್ಟಿ , ಸಂಚಾಲಕರಾಗಿ ಶಾಸಕ ಹರೀಶ್ ಪೂಂಜ

Suddi Udaya

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

Suddi Udaya
error: Content is protected !!