24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಪ್ಪೆಟ್ಟಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ನೂತನ ಶೌಚಾಲಯದ ಉದ್ಘಾಟನೆ

ಕುಪ್ಪೆಟ್ಟಿ: ಸ.ಉ.ಹಿ.ಪ್ರಾ.ಶಾಲೆ ಕುಪ್ಪೆಟ್ಟಿಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ನೂತನ ಶೌಚಾಲಯದ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಎಸ್ ಡಿ ಎಂ ಸಿ ಅಧ್ಯಕ್ಷ ಅಶ್ರಫ್ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ನಾಯ್ಕ ರವರು ನೂತನ ಶೌಚಾಲಯದ ಉದ್ಘಾಟನೆಯನ್ನು ಮಾಡಿದರು. ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಎಸ್ ಡಿ ಎಂ ಸಿ ಸದಸ್ಯರು ಪೋಷಕರು ಹಿರಿಯ ವಿದ್ಯಾರ್ಥಿಗಳು ಊರ ಮಹನೀಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಬಳಿಕ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಅಶ್ರಫ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ನಾಯ್ಕ ರವರು ಶುಭವನ್ನು ಹಾರೈಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವನಿತಾ ಸ್ವಾಗತಿಸಿದರು. ಟಿಜಿಟಿ ಶಿಕ್ಷಕಿ ಶ್ರೀಮತಿ ರಶ್ಮಿ ಬಿ ಯವರು ದಿನಾಚರಣೆಯ ಮಹತ್ವದ ಕುರಿತು ಭಾಷಣ ಮಾಡಿದರು.

ವಿದ್ಯಾರ್ಥಿಗಳಾದ ಫಾತಿಮಾ ಶಾನಿಷ್ಮ, ಸುಂದುಸ್ ಹರ್ಲಿನ್, ಫಾತಿಮಾತ್ ಸ್ವಪ, ರಿದಾರವರು ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಶಾಲೆಗೆ ಸೌಂಡ್ ಸಿಸ್ಟಮ್ ಅನ್ನು ಕೊಡುಗೆಯಾಗಿ ನೀಡಿದ ಅಶ್ರಫ್ ಮತ್ತು ಶ್ರೀಮತಿ ಶೋಭಾ , ನೂತನ ಶೌಚಾಲಯಕ್ಕೆ ಬಾಗಿಲಿನ ವ್ಯವಸ್ಥೆಯನ್ನು ಒದಗಿಸಿಕೊಟ್ಟ ಅಶ್ರಫ್ ಬಾಯ್ತರ್ ರವರಿಗೆ ಗೌರವಾರ್ಪಣೆ ಮಾಡಲಾಯಿತು.

ಶಿಕ್ಷಕಿ ಶ್ರೀಮತಿ ಶಬನ ಬಾನು ರವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಸಹ ಶಿಕ್ಷಕಿ ಶ್ರೀಮತಿ ವಿನುತಾ ಎಸ್ ಸಾಲಿಯಾನ್ ರವರು ಧನ್ಯವಾದ ಸಮರ್ಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.ಶಿಕ್ಷಕಿಯರಾದ ಪದ್ಮಾವತಿ, ರಾಧಾಬಾಯಿ,ವನಿತಾ, ಪೂರ್ಣಿಮಾ,ಲಿಖಿತಾರವರು ಸಹಕರಿಸಿದರು.

Related posts

ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ಮುಂಡೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ: ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಗೌರವಾರ್ಪಣೆ

Suddi Udaya

ಅಳದಂಗಡಿ ವಲಯ ಅರಣ್ಯದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ನೆರಿಯದಲ್ಲಿ ಚಿರತೆ ದಾಳಿಯಿಂದ ಕಡವೆ ಸಾವು: ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ದಫನ

Suddi Udaya

ಬಜಿರೆ ಪಾಲ್ದ್ಯಾರು ಮನೆಯ ಶ್ರೀಮತಿ ಚಿನ್ನಮ್ಮ ನಿಧನ

Suddi Udaya

ಗೇರುಕಟ್ಟೆಯಲ್ಲಿ ಅಪೂರ್ವವಾಗಿ ನಡೆದ ಮಾತೃ ವಂದನಾ ಕಾರ್ಯಕ್ರಮ

Suddi Udaya
error: Content is protected !!