25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಎಸ್‌ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಚಿಲಿಂಬಿ ಧ್ವಜಾರೋಹಣ ಮಾಡಿದರು.


ನಂತರ ಬ್ಯಾಂಡ್ ಸೆಟ್ ನೊಂದಿಗೆ ಪ್ರಭಾತ್ ಬೇರಿಯನ್ನು ಮಾಡಲಾಯಿತು. ಸಿರಾಜ್ ಎಂ ಚಿಲಿಂಬಿ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿಗಳಾಗಿ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾದ ಗಣೇಶ್, ಸದಸ್ಯರುಗಳಾದ ಶ್ರೀಮತಿ ಶಾಲಿನಿ, ಶ್ರೀಮತಿ ಅಮೀನಾ, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ಲಾವಣ್ಯ ಶೆಟ್ಟಿ ಅರ್ಕಜೆ, ದಾನಿಗಳಾದ ಶಂಸುಲ್ ಉಲಾಮಾ ಕ್ರಿಯಾ ಸಮಿತಿ ಮದ್ದಡ್ಕ ಇದರ ಗೌರವಾಧ್ಯಕ್ಷ ಎಂ ಎ ಅಬ್ದುಲ್ ಖಾದರ್, ಉಪಾಧ್ಯಕ್ಷರಾದ ರಿಜ್ವಾನ್, ಕೊಡುಗೆ ದಾನಿಗಳಾದ ಸಾಜಿದ್ ಮದ್ದಡ್ಕ, ಉಪೇಂದ್ರ ಆಚಾರ್ಯ, ಧನಂಜಯ ಕುಮಾರ್ ಆಲಂದಿಲ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್, ಶಾಲಾ ನಾಯಕಿ ರಾಯಿಶ, ಎಸ್ ಡಿ ಎಂ ಸಿ ಸದಸ್ಯರು, ಧ.ಗ್ರಾ.ಯೋ. ಸೇವಾನಿರತೆ ಶ್ರೀಮತಿ ಜಾನಕಿ ಎಸ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಚಂದ್ರಹಾಸ ಕೇದೆ ಮನೆ ಹಾಗೂ ಮುರಳಿಧರ ಕೇದಳಿಕೆ ಇವರು ನೀಡಿದ ಕಲಿಕೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೂತನ ಶಾಲಾ ವಿದ್ಯಾರ್ಥಿಗಳಿಗೆ ಐ.ಡಿ, ಟೈ, ಬೆಲ್ಟ್ ವಿತರಣೆ ಕಾರ್ಯಕ್ರಮ ಜರುಗಿತು. ಸಹ ಶಿಕ್ಷಕಿ ಶ್ರೀಮತಿ ಧವಲಾ ಎ ಕಾರ್ಯಕ್ರಮ ನಿರೂಪಿಸಿ , ಹಿರಿಯ ಶಿಕ್ಷಕಿ ಫಿಲೋಮಿನ ಲೋಬೋ ವಂದಿಸಿದರು‌. ಅಧ್ಯಾಪಕ ವೃಂದ ಸಹಕರಿಸಿದರು.

Related posts

ಬಿಜೆಪಿ ರೆಖ್ಯ ಗ್ರಾಮದ ಶಕ್ತಿ ಕೇಂದ್ರ ಪ್ರಮುಖ್ ರಾಗಿ ಚೇತನ್ ಕುಮಾರ್ ಆಯ್ಕೆ

Suddi Udaya

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya

ಬದ್ಯಾರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘದಿಂದ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರವರಿಗೆ ‘ಆಯುಷ್ ರತ್ನ ಪ್ರಶಸ್ತಿ’ ಪುರಸ್ಕಾರ

Suddi Udaya

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya
error: Content is protected !!