September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ ಆರಂಭ: 400ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರು

ಬೆಳ್ತಂಗಡಿ: ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಶನಿವಾರ ‘ಧರ್ಮಸ್ಥಳ ಚಲೋ’ ಅಭಿಯಾನ ಆರಂಭಗೊಂಡಿದೆ.

ಬೆಂಗಳೂರಿನ ನೆಲಮಂಗಲ ಟೋಲ್ ಮೂಲಕ ಸುಮಾರು 400ಕ್ಕೂ ಹೆಚ್ಚು ವಾಹನಗಳಲ್ಲಿ ಯಲಹಂಕ ಕ್ಷೇತ್ರದ ಭಕ್ತರೊಂದಿಗೆ ವಿಶ್ವನಾಥ್‌ ಅವರು ಶ್ರೀಕ್ಷೇತ್ರಕ್ಕೆ ಪ್ರಯಾಣ ಆರಂಭಿಸಲಿದ್ದಾರೆ.

ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ಕೆಲವು ಯೂಟ್ಯೂಬರ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ನಡೆಸುತ್ತಿರುವ ಪಿತೂರಿ ಖಂಡಿಸಿ ಬೃಹತ್ ಯಾತ್ರೆ ಕೈಗೊಂಡಿದ್ದು ಒಂದು ವಾರದಿಂದ ಸಿದ್ಧತೆ ನಡೆಸಲಾಗಿದೆ.

ಸಂಜೆ ಧರ್ಮಸ್ಥಳದ ಮಂಜುನಾಥನ ವಿಶೇಷ ದರ್ಶನ ಪಡೆದು ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂಬ ಬೇಡಿಕೆಯೊಂದಿಗೆ ಸಂಕಲ್ಪ ಮಾಡಲಿದ್ದಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಧರ್ಮಸ್ಥಳಕ್ಕೆ ಹೋಗುತ್ತಿದ್ದೇವೆ. ಸಂಜೆ ಮಂಜುನಾಥ ಸ್ವಾಮಿ ದರ್ಶನ ಪಡೆದು ಸಂಕಲ್ಪ ಮಾಡುತ್ತೇವೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದು ಸಂಕಲ್ಪ ಮಾಡುತ್ತೇವೆ ಎಂದು ವಿಶ್ವನಾಥ್‌ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

Suddi Udaya

ಬೆಳ್ತಂಗಡಿ : ಟೀಮ್ ಸತ್ಯಜಿತ್‌ ಸುರತ್ಕಲ್ ತಂಡದಿಂದ ಬೃಹತ್ ಜನಾಗ್ರಹ ಸಭೆಯ ಪೂರ್ವಭಾವಿ ಸಭೆ

Suddi Udaya

ನಿಡ್ಲೆ ಪ್ರೇರಣ ಸಂಜೀವಿನಿ ಹಾಗೂ ಕಳೆಂಜ ಸಂಜೀವಿನಿ ಒಕ್ಕೂಟದಿಂದ ಸಮಗ್ರ ಕೃಷಿ ಸಮೂಹ ಚಟುವಟಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ: ತನಿಖೆ ಆರಂಭಿಸಿದ ಸಿಐಡಿ ತಂಡ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ ಪೌಲೋಸ್ ಹಾಗೂ ಕಲ್ಲಡ್ಕ ಪ್ರಭಾಕರ ಭಟ್

Suddi Udaya

ಕುಕ್ಕೇಡಿ : ಪಡ್ಯೋಡಿ ಬೈಲು ನಿವಾಸಿ ಗೋಪಿ ನಿಧನ

Suddi Udaya
error: Content is protected !!