ಧರ್ಮಸ್ಥಳ : ಇಲ್ಲಿಯ ಚಂದ್ರಗಿರಿ ನಗರದ ಪೋಸೋಲಿಕೆ ಅಂಗನವಾಡಿ ಕೇಂದ್ರದಲ್ಲಿ 79 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ದ್ವಜಾರೋಹಣವನ್ನು ಜಮಾ ಉಗ್ರಾಣದ ಮಾಜಿ ಮುತ್ಸದಿ ಯಕ್ಷಗಾನ ಕಲಾ ಪೋಷಕ ಭುಜಬಲಿ.ಬಿ ಯವರು ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಶ್ರೀಮತಿ ಧನಲಕ್ಷ್ಮೀ ಜನಾರ್ದನ್, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀಮತಿ ಸವಿತಾ ಮಂಜುನಾಥ್, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ರೇವತಿ ಅಣ್ಣಪ್ಪ ಆಚಾರಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶೃಂಗಾರ್ ಮಗುವಿನ ಹುಟ್ಟು ಹಬ್ಬದ ಪ್ರಯುಕ್ತ ಮಾವಿನ ಹಣ್ಣಿನ ಗಿಡವನ್ನು ನೆಡಲಾಯಿತು. ಬಾಲ ವಿಕಾಸ ಸಮಿತಿ ಎಲ್ಲಾ ಸದಸ್ಯರು, ಮಕ್ಕಳ ಪೋಷಕರು, ಸ್ತ್ರಿ ಶಕ್ತಿ ಸಂಘದ ಸದಸ್ಯರು, ಸ್ವಸಹಾಯ ಸಂಘದ ಸದಸ್ಯರು, ಪುಟಾಣಿ ಮಕ್ಕಳು, ಊರಿನ ಗಣ್ಯರು, ಅಂಗನವಾಡಿ ಸಹಾಯಕಿ ಶ್ರೀಮತಿ ಭಾಗ್ಯ ರವರು ಭಾಗವಹಿಸಿದರು.
ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಬಿಂದು ಸ್ವಾಗತಿಸಿದರು.











