24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ 5 ಮಂದಿ ಕೃಷಿಕರಿಗೆ ಅತ್ಯುತ್ತಮ ಸಾವಯವ ಪ್ರೋತ್ಸಾಹ ರೈತ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ಸಾವಯವ ಕೃಷಿ ಯೋಜನೆ, ಮಂಗಳ ಕಿಸಾನ್ ಸಮೃದ್ಧಿ ವಿಭಾಗ ಬಿ.ಸಿ ರೋಡ್ ಬಂಟ್ವಾಳ ಇವರು ಕೊಡ ಮಾಡುವ ಅತ್ಯುತ್ತಮ ಸಾವಯವ ಕೃಷಿ ರೈತ ಪ್ರಶಸ್ತಿ ಪ್ರೋತ್ಸಾಹಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಪ್ರಗತಿಪರ ಕೃಷಿಕರಾದ ನಡ ಗ್ರಾಮದ ಕೃಷ್ಣಪ್ಪ ಪೂಜಾರಿ, ಬಳಂಜ ಗ್ರಾಮದ ರಮಾನಾಥ ಶೆಟ್ಟಿ,ನಾವರ ಗ್ರಾಮದ ನವೀನ್ ಪೂಜಾರಿ, ಕಣಿಯೂರು ಗ್ರಾಮದ ಅಜಿತ್ ಜೈನ್ ಹಾಗೂ ಇಳಂತಿಲ ಗ್ರಾಮದ ತಿಮ್ಮಪ್ಪ ಗೌಡ ಅವರು ಆಯ್ಕೆಗೊಂಡು ಆ. 10 ರಂದು ಬಿ.ಸಿ ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಮಾನಾಥ ರೈಯವರಿಂದ ಪ್ರಶಸ್ತಿ ಪಡೆದು ಸನ್ಮಾನ ಸ್ವೀಕರಿಸಿದರು.


ಇವರು ಮಂಗಳ ಮತ್ತು ಸನ್ಮಾನ ‘ಕಿಸಾನ್ ಸಮೃದ್ಧಿ ಸಾವಯವ ಗೊಬ್ಬರವನ್ನು ತಮ್ಮ ಅಡಿಕೆ, ತೆಂಗು, ಕಾಳು ಮೆಣಸು, ಮತ್ತು ತರಕಾರಿ ಬೆಳೆಗಳಿಗೆ ಕಳೆದ 9 ವರ್ಷಗಳಿಂದ ಸತತವಾಗಿ ಬಳಕೆ ಮಾಡುವ ಮೂಲಕ ಉತ್ತಮ ಇಳುವರಿ ಪಡೆದ ಸಂತೃಪ್ತ ಬಳಕೆದಾರರಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕ ಮೋಹನ್ ಗೌಡ, ಅಶ್ವಿನಿ ಮೋಹನ್ ಗೌಡ, ಹಿರಿಯ ಅಧಿಕಾರಿ ಭಾರತಿ ರೈ,ದ.ಕ ಜಿಲ್ಲಾ, ಉಡುಪಿ, ಕಾಸರಗೋಡು, ಬೆಳ್ತಂಗಡಿ ಭಾಗಗಳಿಂದ, ಉದ್ಯೋಗಿಗಳು, ಬಳಕೆದಾರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಎಂ.ಆರ್ ಡ್ರೆಸ್ಸಸ್ ನಲ್ಲಿ ಕ್ಲಿಯರೆನ್ಸ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ. 30 ರಷ್ಟು ರಿಯಾಯಿತಿ

Suddi Udaya

ಉಪ ನಿರೀಕ್ಷಕರಾಗಿ ಭಡ್ತಿಗೊಂಡ ದೇವಪ್ಪ ಎಂ ಉಪ್ಪಿನಂಗಡಿ ಠಾಣಾ ಸಂಚಾರಿ ವಿಭಾಗದಲ್ಲಿ ಅಧಿಕಾರ ಸ್ವೀಕಾರ

Suddi Udaya

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ರಕ್ಷಿತ್ ಅಂಡಿಂಜೆ ಆಯ್ಕೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್ ಶಿಪ್

Suddi Udaya
error: Content is protected !!