25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ 5 ಮಂದಿ ಕೃಷಿಕರಿಗೆ ಅತ್ಯುತ್ತಮ ಸಾವಯವ ಪ್ರೋತ್ಸಾಹ ರೈತ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ಸಾವಯವ ಕೃಷಿ ಯೋಜನೆ, ಮಂಗಳ ಕಿಸಾನ್ ಸಮೃದ್ಧಿ ವಿಭಾಗ ಬಿ.ಸಿ ರೋಡ್ ಬಂಟ್ವಾಳ ಇವರು ಕೊಡ ಮಾಡುವ ಅತ್ಯುತ್ತಮ ಸಾವಯವ ಕೃಷಿ ರೈತ ಪ್ರಶಸ್ತಿ ಪ್ರೋತ್ಸಾಹಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಪ್ರಗತಿಪರ ಕೃಷಿಕರಾದ ನಡ ಗ್ರಾಮದ ಕೃಷ್ಣಪ್ಪ ಪೂಜಾರಿ, ಬಳಂಜ ಗ್ರಾಮದ ರಮಾನಾಥ ಶೆಟ್ಟಿ,ನಾವರ ಗ್ರಾಮದ ನವೀನ್ ಪೂಜಾರಿ, ಕಣಿಯೂರು ಗ್ರಾಮದ ಅಜಿತ್ ಜೈನ್ ಹಾಗೂ ಇಳಂತಿಲ ಗ್ರಾಮದ ತಿಮ್ಮಪ್ಪ ಗೌಡ ಅವರು ಆಯ್ಕೆಗೊಂಡು ಆ. 10 ರಂದು ಬಿ.ಸಿ ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಮಾನಾಥ ರೈಯವರಿಂದ ಪ್ರಶಸ್ತಿ ಪಡೆದು ಸನ್ಮಾನ ಸ್ವೀಕರಿಸಿದರು.


ಇವರು ಮಂಗಳ ಮತ್ತು ಸನ್ಮಾನ ‘ಕಿಸಾನ್ ಸಮೃದ್ಧಿ ಸಾವಯವ ಗೊಬ್ಬರವನ್ನು ತಮ್ಮ ಅಡಿಕೆ, ತೆಂಗು, ಕಾಳು ಮೆಣಸು, ಮತ್ತು ತರಕಾರಿ ಬೆಳೆಗಳಿಗೆ ಕಳೆದ 9 ವರ್ಷಗಳಿಂದ ಸತತವಾಗಿ ಬಳಕೆ ಮಾಡುವ ಮೂಲಕ ಉತ್ತಮ ಇಳುವರಿ ಪಡೆದ ಸಂತೃಪ್ತ ಬಳಕೆದಾರರಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕ ಮೋಹನ್ ಗೌಡ, ಅಶ್ವಿನಿ ಮೋಹನ್ ಗೌಡ, ಹಿರಿಯ ಅಧಿಕಾರಿ ಭಾರತಿ ರೈ,ದ.ಕ ಜಿಲ್ಲಾ, ಉಡುಪಿ, ಕಾಸರಗೋಡು, ಬೆಳ್ತಂಗಡಿ ಭಾಗಗಳಿಂದ, ಉದ್ಯೋಗಿಗಳು, ಬಳಕೆದಾರರು ಉಪಸ್ಥಿತರಿದ್ದರು.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಸಂಪ್ರಿತ ಜೈನ್ ಅಂಡಿಂಜೆ ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಣೆ

Suddi Udaya

ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜಿಸಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಮಹೋತ್ಸವ ಕ್ರೀಡಾ ಸಂಭ್ರಮ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಗೆ ಶೇ.98.68 ಫಲಿತಾಂಶ

Suddi Udaya

ಕೊಕ್ಕಡ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya
error: Content is protected !!