September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಲಯನ್ಸ್ ಕ್ಲಬ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಲಯನ್ಸ್ ಭವನದಲ್ಲಿ ಆಚರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ನ ಅಧ್ಯಕ್ಷ ಲಯನ್ ಮುರಳಿ ಬಲಿಪ ಇವರು ವಹಿಸಿಕೊಂಡರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ತಹಶೀಲ್ದಾರ್ ಪೃಥ್ವಿ ಸಾನಿಕಂ ಭಾಗವಹಿಸಿ ರಾಷ್ಟ್ರಸೇವೆಗಾಗಿ ನಾವು ಸದಾ ಸಿದ್ಧರಿರೋಣ ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಕರ್ತವ್ಯವನ್ನು ನಿರ್ವಹಿಸಿ ನಿವೃತ್ತರಾದ ಲಯನ್ ಎ. ಕೆ ಶಿವನ್ ಹಾಗೂ ಲಯನ್ ಗೋಪಾಲಕೃಷ್ಣ ಕಾಂಚೋಡು ಇವರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಮಾಜಿ ಯೋಧರಾದ ಲಯನ್ ಮೋಹನ ಎಚ್.ಕೆ ಉಪಸ್ಥಿತರಿದ್ದರು.

ಪೂರ್ವ ಪ್ರಾಂತ್ಯ ಅಧ್ಯಕ್ಷ ಲಯನ್ ಧರಣೇಂದ್ರ ಕೆ ಜೈನ್ ಸ್ವಾಗತಿಸಿದರು. ಪೂರ್ವ ಪ್ರಾಂತ್ಯ ಅಧ್ಯಕ್ಷ ಲಯನ್ ವಸಂತ ಶೆಟ್ಟಿ ಶ್ರದ್ಧಾ ಮುಖ್ಯ ಅತಿಥಿಗಳ ಪರಿಚಯವನ್ನು ಮಾಡಿದರು. ಕೋಶಾಧಿಕಾರಿ ಲಯನ್ ಸುಭಾಷಿಣಿ ಧನ್ಯವಾದ ಸಲ್ಲಿಸಿದರು. ಕಾರ್ಯದರ್ಶಿ ಲಯನ್ ಅಮಿತಾನಂದ ಹೆಗ್ಡೆ ಇವರು ಮುಂದಿನ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಲಯನ್ ಕೃಷ್ಣ ಕೆ ಆಚಾರ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಲಿಯೋ ಕ್ಲಬ್ ನ ಅಧ್ಯಕ್ಷ ಲಿಯೋ ಭಾಷಿಣಿ ಉಪಸ್ಥಿತರಿದ್ದರು. ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪ್ರಚಂಡ ಗೆಲುವು: ಅಭಿವೃದ್ಧಿಗೆ ಸಂದ ಭರ್ಜರಿ ಜಯ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂಗೆ ಸೋಲು

Suddi Udaya

ಬೆಳ್ತಂಗಡಿ:ಸಹಕಾರಿಗಳ ನಡಿಗೆ ಧರ್ಮಸ್ಥಳ ಕಡೆಗೆ ಪೂರ್ವಭಾವಿ ಸಭೆ

Suddi Udaya

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಮಹಾದೇವಲಯದಲ್ಲಿ ಪಾಸ್ಕ ಹಬ್ಬದ ಆಚರಣೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಭೇಟಿ

Suddi Udaya
error: Content is protected !!