23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಕ್ತೇಶ್ವರಿ ಪದವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ನ್ಯಾಯತರ್ಫು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ರಕ್ತೇಶ್ವರಿ ಪದವು ಇಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಕುಶಾಲಪ್ಪ ಗೌಡ ಕಲಾಯಿತೋಟ್ಟು ಧ್ವಜಾರೋಹಣ ನೆರವೇರಿಸಿದರು.
ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್ ದೀಪ ಬೆಳಗಿಸಿ ಉದ್ಘಾಟಿಸಿದರು. ಸಭಾ ಅಧ್ಯಕ್ಷತೆಯನ್ನು ಎಸ್.ಡಿ.ಎಮ್.ಸಿ ಅಧ್ಯಕ್ಷ ಕುಶಾಲಪ್ಪ ಗೌಡ ಕಲಾಯಿತೋಟ್ಟು ವಹಿಸಿದ್ದರು .

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ವಿಜಯ್ ಕುಮಾರ್ ಮೋಹಿನಿ ಬೊಮ್ಮಣ್ಣ ಗೌಡ ಮತ್ತು ಶ್ವೇತಾ
ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಇಂದಿರಾ, ಎಸ್.ಡಿ.ಎಮ್.ಸಿ ಮಾಜಿ ಅಧ್ಯಕ್ಷ ಗಿರಿಯಪ್ಪ ಗೌಡ, ಯಾದವ ಗೌಡ,
ಕವಿತಾ ಶ್ರೀ, ಭಜನಾ ಮಂಡಳಿಯ ಅಧ್ಯಕ್ಷ ಯುವರಾಜ್ ಎಮ್, ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವಸಂತ ಕುಮಾರ್,
ಅಂಗನವಾಡಿ ಕಾರ್ಯಕರ್ತೆ ಸುನಿತಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಪೋಷಕರು ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಕ್ಕಳಿಗೆ ದೇಶ ಭಕ್ತಿ ಗೀತೆ ಛದ್ಮವೇಶ ಸ್ಪರ್ಧೆ ನಡೆಯಿತು. ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ಚೈತ್ರ ಪ್ರಭಾ ಸ್ವಾಗತಿಸಿದರು. ಸಹ ಶಿಕ್ಷಕಿ ಲಾವಣ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

Suddi Udaya

ಮುಂಡಾಜೆ ಮಾಲತಿ ಪ್ರಭು ನಿಧನ

Suddi Udaya
error: Content is protected !!