July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ವೇಣೂರು: ಇಲ್ಲಿನ ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣಾ ಕಾರ್ಯಕ್ರಮವು ನಡೆಯಿತು.

ಭರತ್ ಯು. ಜಿ ಅರಣ್ಯಾಧಿಕಾರಿ ವೇಣೂರು ಹಾಗೂ ಶಾಲಾ ಸಂಸ್ಥಾಪಕ ಗಿರೀಶ್ ಕೆ ಹೆಚ್, ಕುಂಭಶ್ರೀ ವೈಭವ ಸಮಿತಿಯ ಅಧ್ಯಕ್ಷ ಹರೀಶ್ ಪೊಕ್ಕಿ, ಕಾಲೇಜಿನ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷಗೋಪಾಲ ಶೆಟ್ಟಿ, ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಚಂದ್ರಶೇಖರ ಇವರು ಧ್ವಜಾರೋಹಣ ನೆರವೇರಿಸಿದರು.

ಮುಖ್ಯ ಅತಿಥಿಯಾದ ತಿಮ್ಮಪ್ಪ ಮೂಲ್ಯ ಮಾಜಿ ಸೈನಿಕರು ಮಂಗಳೂರು ಇವರು ಈ ಶಾಲೆಯು ಸಂಸ್ಕಾರಕ್ಕೆ ಮಾದರಿಯಾಗಿದೆ, ಇನ್ನು ಮುಂದಕ್ಕೂ ಇದೇ ರೀತಿ ಮುಂದುವರಿಯಲಿ ಎಂದು ಹೇಳಿದರು.ಅದೇ ರೀತಿ ವೇಣೂರಿನ ಅರಣ್ಯಾಧಿಕಾರಿ ಭರತ್ ಯುಜಿ ಇವರು ಒಳ್ಳೆಯ ವಿದ್ಯಾಭ್ಯಾಸವನ್ನು ಪಡೆದು ಉತ್ತಮ ಪ್ರಜೆಗಳಾಗಿ ಬಾಳಿ ಎಂದು ಮಕ್ಕಳಿಗೆ ಕಿವಿಮಾತು ನೀಡಿದರು.

ಹರೀಶ್ ಪೊಕ್ಕಿ ಇವರು ಈ ವಿದ್ಯಾ ಸಂಸ್ಥೆಯು ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯ ಉತ್ತಮವಾಗಲಿ ಎಂದು ಶುಭ ಹಾರೈಸಿದರು. ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಗೋಪಾಲ ಶೆಟ್ಟಿ ಇವರು ಮನುಷ್ಯನ ಜೀವನದಲ್ಲಿ ಶಿಸ್ತು ಅತ್ಯಗತ್ಯ .ಈ ಶಾಲೆಯು ಶಿಸ್ತಿಗೆ ಎತ್ತಿದ ಕೈ ಎಂದರು .

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಸದಸ್ಯ ವಸಂತ್ ಪಡೀಲ್ , ಪೋಷಕರು , ಕಾಲೇಜಿನ ಪ್ರಾಂಶುಪಾಲರಾದ ಓಮನ ಎಂ ಎ , ಎಲ್ಲಾ ಮುಖ್ಯೋಪಾಧ್ಯಾಯನಿಯರು , ಶಿಕ್ಷಕ ವೃಂದದವರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕ ಅಭಿಲಾಷ್ ಮತ್ತು ಪ್ರೌಢಶಾಲಾ ವಿಭಾಗದ ವಿಭಾಗದ ಶಿಕ್ಷಕಿ ಶ್ರೀಮತಿ ಅಕ್ಷತಾ ನಿರೂಪಿಸಿ , ರಷ್ಯಾದಲ್ಲಿ ಎಂ ಬಿ ಬಿ ಎಸ್ ವ್ಯಾಸಾಂಗ ಮಾಡುತ್ತಿರುವ, ನಮ್ಮ ಶಾಲಾ ಹಿರಿಯ ವಿದ್ಯಾರ್ಥಿಯಾದ ಪೂಜಿತ್ ಕುಲಾಲ್ ಸ್ವಾಗತಿಸಿ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಮಮತಾ ಶಾಂತಿ ವಂದಿಸಿದರು.

Related posts

ಶಿರ್ಲಾಲು ನಿವಾಸಿ ತಾರನಾಥ ಪೂಜಾರಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ

Suddi Udaya

ಕಳೆಂಜ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಪೋಕ್ಸೋ ಪ್ರಕರಣ: ಸರಿಯಾದ ತನಿಖೆಯನ್ನು ಮಾಡಿ ಸತ್ಯಾಂಶವನ್ನು ಹೊರ ತರುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು: ಕಳೆಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸನ್ನ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ಬಿವೋಕ್ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

Suddi Udaya
error: Content is protected !!