25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ವೇಣೂರು: ಇಲ್ಲಿನ ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣಾ ಕಾರ್ಯಕ್ರಮವು ನಡೆಯಿತು.

ಭರತ್ ಯು. ಜಿ ಅರಣ್ಯಾಧಿಕಾರಿ ವೇಣೂರು ಹಾಗೂ ಶಾಲಾ ಸಂಸ್ಥಾಪಕ ಗಿರೀಶ್ ಕೆ ಹೆಚ್, ಕುಂಭಶ್ರೀ ವೈಭವ ಸಮಿತಿಯ ಅಧ್ಯಕ್ಷ ಹರೀಶ್ ಪೊಕ್ಕಿ, ಕಾಲೇಜಿನ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷಗೋಪಾಲ ಶೆಟ್ಟಿ, ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಚಂದ್ರಶೇಖರ ಇವರು ಧ್ವಜಾರೋಹಣ ನೆರವೇರಿಸಿದರು.

ಮುಖ್ಯ ಅತಿಥಿಯಾದ ತಿಮ್ಮಪ್ಪ ಮೂಲ್ಯ ಮಾಜಿ ಸೈನಿಕರು ಮಂಗಳೂರು ಇವರು ಈ ಶಾಲೆಯು ಸಂಸ್ಕಾರಕ್ಕೆ ಮಾದರಿಯಾಗಿದೆ, ಇನ್ನು ಮುಂದಕ್ಕೂ ಇದೇ ರೀತಿ ಮುಂದುವರಿಯಲಿ ಎಂದು ಹೇಳಿದರು.ಅದೇ ರೀತಿ ವೇಣೂರಿನ ಅರಣ್ಯಾಧಿಕಾರಿ ಭರತ್ ಯುಜಿ ಇವರು ಒಳ್ಳೆಯ ವಿದ್ಯಾಭ್ಯಾಸವನ್ನು ಪಡೆದು ಉತ್ತಮ ಪ್ರಜೆಗಳಾಗಿ ಬಾಳಿ ಎಂದು ಮಕ್ಕಳಿಗೆ ಕಿವಿಮಾತು ನೀಡಿದರು.

ಹರೀಶ್ ಪೊಕ್ಕಿ ಇವರು ಈ ವಿದ್ಯಾ ಸಂಸ್ಥೆಯು ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯ ಉತ್ತಮವಾಗಲಿ ಎಂದು ಶುಭ ಹಾರೈಸಿದರು. ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಗೋಪಾಲ ಶೆಟ್ಟಿ ಇವರು ಮನುಷ್ಯನ ಜೀವನದಲ್ಲಿ ಶಿಸ್ತು ಅತ್ಯಗತ್ಯ .ಈ ಶಾಲೆಯು ಶಿಸ್ತಿಗೆ ಎತ್ತಿದ ಕೈ ಎಂದರು .

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಸದಸ್ಯ ವಸಂತ್ ಪಡೀಲ್ , ಪೋಷಕರು , ಕಾಲೇಜಿನ ಪ್ರಾಂಶುಪಾಲರಾದ ಓಮನ ಎಂ ಎ , ಎಲ್ಲಾ ಮುಖ್ಯೋಪಾಧ್ಯಾಯನಿಯರು , ಶಿಕ್ಷಕ ವೃಂದದವರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಉಪನ್ಯಾಸಕ ಅಭಿಲಾಷ್ ಮತ್ತು ಪ್ರೌಢಶಾಲಾ ವಿಭಾಗದ ವಿಭಾಗದ ಶಿಕ್ಷಕಿ ಶ್ರೀಮತಿ ಅಕ್ಷತಾ ನಿರೂಪಿಸಿ , ರಷ್ಯಾದಲ್ಲಿ ಎಂ ಬಿ ಬಿ ಎಸ್ ವ್ಯಾಸಾಂಗ ಮಾಡುತ್ತಿರುವ, ನಮ್ಮ ಶಾಲಾ ಹಿರಿಯ ವಿದ್ಯಾರ್ಥಿಯಾದ ಪೂಜಿತ್ ಕುಲಾಲ್ ಸ್ವಾಗತಿಸಿ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಮಮತಾ ಶಾಂತಿ ವಂದಿಸಿದರು.

Related posts

ನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಅರಿವು ಕಾರ್ಯಕ್ರಮ

Suddi Udaya

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ವಿಪತ್ತು ಘಟಕದಿಂದ ಶಾಲಾ ಪ್ರಾರಂಭೋತ್ಸವದ ದಿನದಂದೆ ಕಲ್ಮಂಜ ಶಾಲೆಯ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ

Suddi Udaya

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

Suddi Udaya
error: Content is protected !!