25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ನಾವೂರು : ಸರಕಾರಿ ಪ್ರೌಢ ಶಾಲೆ ನಾವೂರು ಇಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.


ಶಾಲಾ ಮುಖ್ಯಶಿಕ್ಷಕ ರಾಜೇಂದ್ರ ಭಟ್ ರವರ ಮುಂದಾಳತ್ವದಲ್ಲಿ ಶಾಲೆಯ ಎಲ್ಲಶಿಕ್ಷಕರ ಸಹಯೋಗದೊಂದಿಗೆ ಎಸ್. ಡಿ.ಎಂ. ಸಿ ಉಪಾಧ್ಯಕ್ಷ ಉಮೇಶ್ ಪ್ರಭು ಹಡೀಲ್ ರವರ ಉಪಸ್ಥಿತಿಯಲ್ಲಿ ನಾವೂರಿನ ಪ್ರಸಿದ್ಧ ವೈದ್ಯ ಡಾ. ಪ್ರದೀಪ್ ರವರು ದ್ವಜಾರೋಹಣ ಮಾಡಿ ಸ್ವಾತಂತ್ರ್ಯ ಸಂದೇಶ ನೀಡಿದರು.

ಮುಖ್ಯ ಅತಿಥಿಗಳಾಗಿ ಗ್ರಾಮಪಂಚಾಯತ್ ಸದಸ್ಯರು, ಎಸ್ಡಿಎಂಸಿ ಸದಸ್ಯರು, ಪೋಷಕರು, ಆಟೋ ಮಾಲಕ ಚಾಲಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಪುರಮೆರವಣಿಗೆಯಲ್ಲಿ ಎಲ್ಲ ದೇಶಭಕ್ತ ಬಂಧುಗಳು ವಿದ್ಯಾರ್ಥಿಗಳೊಂದಿಗೆ ಘೋಷವಾಕ್ಯ ಕೂಗುತ್ತ ಮುನ್ನಡೆದರು. ನಂತರ ಮಕ್ಕಳ ಸಾಂಸ್ಕತಿಕ ಕಾರ್ಯಕ್ರಮ ನೆರವೇರಿತು.


ಶ್ರೀಮತಿ ಭವ್ಯ ನಿರೂಪಿಸಿ, ಶ್ರೀಮತಿ ನಿಖಿಲಾ ಸ್ವಾಗತಿಸಿ, ಶ್ರೀಮತಿ ಜಯಶ್ರೀ ವಂದಿಸಿದರು. ಶಿಕ್ಷಕಕಿಯರಾದ ಶ್ರೀಮತಿ ಪುಷ್ಪ, ಶ್ರೀಮತಿ ವಿನೋದ ಮತ್ತು ಶ್ರೀಮತಿ ಮೀನ ರವರು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಹಕಾರ ನೀಡಿದರು .

Related posts

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಶ್ರೀವಿಶ್ವಕರ್ಮಾಭ್ಯುದಯ ಸಭಾದಿಂದ ಶ್ರೀವಿಶ್ವಕರ್ಮಯಜ್ಞ ಮತ್ತು ಪೂಜೆ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಲ್ಯಾನ್ಸಿ ಫೆರ್ನಾಂಡಿಸ್ ಇಸ್ರೇಲ್ ನಲ್ಲಿ ನಿಧನ

Suddi Udaya

ಮಚ್ಚಿನ ಮೊರಾರ್ಜಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

Suddi Udaya
error: Content is protected !!