22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ನಾವೂರು : ಸರಕಾರಿ ಪ್ರೌಢ ಶಾಲೆ ನಾವೂರು ಇಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.


ಶಾಲಾ ಮುಖ್ಯಶಿಕ್ಷಕ ರಾಜೇಂದ್ರ ಭಟ್ ರವರ ಮುಂದಾಳತ್ವದಲ್ಲಿ ಶಾಲೆಯ ಎಲ್ಲಶಿಕ್ಷಕರ ಸಹಯೋಗದೊಂದಿಗೆ ಎಸ್. ಡಿ.ಎಂ. ಸಿ ಉಪಾಧ್ಯಕ್ಷ ಉಮೇಶ್ ಪ್ರಭು ಹಡೀಲ್ ರವರ ಉಪಸ್ಥಿತಿಯಲ್ಲಿ ನಾವೂರಿನ ಪ್ರಸಿದ್ಧ ವೈದ್ಯ ಡಾ. ಪ್ರದೀಪ್ ರವರು ದ್ವಜಾರೋಹಣ ಮಾಡಿ ಸ್ವಾತಂತ್ರ್ಯ ಸಂದೇಶ ನೀಡಿದರು.

ಮುಖ್ಯ ಅತಿಥಿಗಳಾಗಿ ಗ್ರಾಮಪಂಚಾಯತ್ ಸದಸ್ಯರು, ಎಸ್ಡಿಎಂಸಿ ಸದಸ್ಯರು, ಪೋಷಕರು, ಆಟೋ ಮಾಲಕ ಚಾಲಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಪುರಮೆರವಣಿಗೆಯಲ್ಲಿ ಎಲ್ಲ ದೇಶಭಕ್ತ ಬಂಧುಗಳು ವಿದ್ಯಾರ್ಥಿಗಳೊಂದಿಗೆ ಘೋಷವಾಕ್ಯ ಕೂಗುತ್ತ ಮುನ್ನಡೆದರು. ನಂತರ ಮಕ್ಕಳ ಸಾಂಸ್ಕತಿಕ ಕಾರ್ಯಕ್ರಮ ನೆರವೇರಿತು.


ಶ್ರೀಮತಿ ಭವ್ಯ ನಿರೂಪಿಸಿ, ಶ್ರೀಮತಿ ನಿಖಿಲಾ ಸ್ವಾಗತಿಸಿ, ಶ್ರೀಮತಿ ಜಯಶ್ರೀ ವಂದಿಸಿದರು. ಶಿಕ್ಷಕಕಿಯರಾದ ಶ್ರೀಮತಿ ಪುಷ್ಪ, ಶ್ರೀಮತಿ ವಿನೋದ ಮತ್ತು ಶ್ರೀಮತಿ ಮೀನ ರವರು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಹಕಾರ ನೀಡಿದರು .

Related posts

ಧರ್ಮಸ್ಥಳ ಪ್ರಕರಣ‌ ಎಸ್.ಐ.ಟಿ ತನಿಖೆಗೆ ತಡೆ ಕೋರಿ ಹೈಕೋರ್ಟ್ ಗೆ ಮತ್ತೊಂದು ಅರ್ಜಿ, ಮನವಿ ತಿರಸ್ಕಾರ

Suddi Udaya

ಕೃಷಿಕರಿಗೆ ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ನಿಯಂತ್ರಿಸುವಂತೆ ಅರಣ್ಯ ಸಚಿವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಚಂದ್ರಕಾಂತ ನಿಡ್ಡಾಜೆ ರವರಿಗೆ ಸನ್ಮಾನ

Suddi Udaya

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya

ಬಿಲ್ಲವ ಸಮಾಜಕ್ಕೆ ಅವಹೇಳನ ಆರೋಪ – ಅನಿತಾ ಕಾಸರಗೋಡು ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!