September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಭಾರತದ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕ್ರಿಶ್ಚಿಯನ್ ಬ್ರದರ್ಸ್ ಕಚೇರಿ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಲಾಯಿತು.

ಮಾಜಿ ಸೈನಿಕ ತೋಮಸ್ ಪಿ.ಜೆ. ಅವರು ಧ್ವಜಾರೋಹಣ ನೆರವೇರಿಸಿ ದೇಶಭಕ್ತಿಯ ಮಹತ್ವವನ್ನು ನೆನಪಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ಅಗಸ್ಟೀನ್ ಟಿ.ಎ. ಧನ್ಯವಾದಗಳನ್ನು ಸಲ್ಲಿಸಿದರು. ಕಾರ್ಯದರ್ಶಿ ಶಿಜೋ ಸ್ವಾಗತಿಸಿದರು. ಗೌರವಾಧ್ಯಕ್ಷರು ಸೆಬಾಸ್ಟಿಯನ್ ಪಿ.ಟಿ., ಗೌರವ ಸಲಹೆಗಾರರು ಜೋಸೆಫ್ ಕೆ.ಡಿ., ಉಪಾಧ್ಯಕ್ಷರು ಮ್ಯಾಥ್ಯೂ ವಿ.ಟಿ., ಕೋಶಾಧಿಕಾರಿ ರಂಜಿತ್ ಪಿ.ಎಸ್. ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಧ್ವಜಾರೋಹಣದ ನಂತರ ರಾಷ್ಟ್ರಗೀತೆಯನ್ನು ಹಾಡಿ ಸ್ವಾತಂತ್ರ್ಯದ ಶ್ರದ್ಧಾಸ್ಪದ ಕ್ಷಣವನ್ನು ಸ್ಮರಿಸಲಾಯಿತು. ಸೈನಿಕರ ತ್ಯಾಗವನ್ನು ನೆನೆದು, ಯುವಪೀಳಿಗೆ ರಾಷ್ಟ್ರಾಭಿಮಾನ ಮತ್ತು ಸೇವಾ ಮನೋಭಾವವನ್ನು ಉಳಿಸಿಕೊಳ್ಳಬೇಕು ಎಂಬ ಸಂದೇಶವನ್ನು ನೀಡಲಾಯಿತು.

Related posts

ಜ.16-25: ಕಾಜೂರು ಮಖಾಂ ಉರೂಸ್: ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಭೆ

Suddi Udaya

ಸೆ.30 : ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಕರ್ಷಕ ಗಿಫ್ಟ್ ಗಳು

Suddi Udaya

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

Suddi Udaya

ಮೇಲಂತಬೆಟ್ಟು ನಿವಾಸಿ ಮಲ್ಲಿಕ್ ನಿಧನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

Suddi Udaya
error: Content is protected !!