32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಪಿನಡ್ಕದಲ್ಲಿ ಗೆಳೆಯರ ಬಳಗದಿಂದ ಶ್ರೀ ಕೃಷ್ಣಾಷ್ಟಮಿ‌ ಸಂಭ್ರಮ : ಸಾಧಕರಿಗೆ ಸನ್ಮಾನ, ಶಾಲೆಗೆ ಗೊದ್ರೇಜ್ ಹಸ್ತಾಂತರ, ಕ್ರೀಡಾಕೂಟ

ಕಾಪಿನಡ್ಕ: ಗಳೆಯರ ಬಳಗದ ವತಿಯಿಂದ, ಶ್ರೀ ಹರಿ ಭಜನಾ ಮಂಡಳಿಯ ಸಹಕಾರದಿಂದ ಕಾಪಿನಡ್ಕದಲ್ಲಿ ಶ್ರೀ ಕೃಷ್ಣಾಷ್ಠಮಿ ಸಂಭ್ರಮವು ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಗೆಳೆಯರ ಬಳಗದ ಗೌರವಾಧ್ಯಕ್ಷ ಕೆ.ವಸಂತ ಸಾಲಿಯಾನ್ ವಹಿಸಿದ್ದರು.

ಎಸ್.ಎಸ್.ಎಲ್.ಸಿ ಯಲ್ಲಿ ಸಾಧನೆ ಮಾಡಿದ ಸಾಧಕರಾದ ಸನ್ನಿಧಿ ಎಸ್ ಹೆಗ್ಡೆ,ಶರಣ್ಯ ಹೆಗ್ಡೆ,ಜೆಇಇ ಅಡ್ವಾನ್ಸ್ ಸಾಧಕ ಅಚಿಂತ್ಯ ದಾಸ್ ಪರವಾಗಿ ಅವರ ತಂದೆ ಮೋಹನ್ ದಾಸ್,ಆಶಾ ಕಾರ್ಯಕರ್ತೆ ಗುಲಾಬಿ ಅವರನ್ನು ಸನ್ಮಾನಿಸಲಾಯಿತು.

ಸಾಯಿರಾಮ್ ಫ್ರೆಂಡ್ಸ್ ತಂಡದ ಪ್ರಮುಖರು,ಕುವೆಟ್ಟು ಗ್ರಾ.ಪಂ ಮಾಜಿ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ ಅವರು ಕಾಪಿನಡ್ಕ ಶಾಲೆಗೆ ಗೊದ್ರೇಜನ್ನು ಕೊಡುಗೆಯಾಗಿ ನೀಡಿದರು.

ವೇದಿಕೆಯಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಯುವ ಉದ್ಯಮಿ ರಾಘವೇಂದ್ರ ಪ್ರಸಾದ್,ಕುವೆಟ್ಟು ಗ್ರಾ.ಪಂ ಮಾಜಿ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ,ಉದ್ಯಮಿ ಸಂತೋಷ್ ಹೆಗ್ಡೆ ಮಾರುತಿ ನಿಲಯ, ಬಳಂಜ ಉಮಾಮಹೇಶ್ವರ ಯುವಕ ಮಂಡಳ ಅಧ್ಯಕ್ಷ ಸುಕೇಶ್ ಕುಮಾರ್, ಪ್ರಗತಿಪರ ಕೃಷಿಕ ಜಗದೀಶ್ ರೈ ಹಾನಿಂಜ, ಅಳದಂಗಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಮೋಹನ್ ದಾಸ್, ಬಳಂಜ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹೇಮಂತ್ ಕಟ್ಟೆ,ಬಳಂಜ ಮಹಿಳಾ ಬಿಲ್ಲವ ವೇದಿಕೆ‌ ಅಧ್ಯಕ್ಷೆ ಭಾರತಿ ಸಂತೋಷ್, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಮಾಲಾ ಎಂ.ಕೆ,ಗೆಳೆಯರ ಬಳಗದ ಅಧ್ಯಕ್ಷ ಲತೇಶ್ ಎ.ಆರ್, ಶಾಲಾ ಮುಖ್ಯೋಪಾಧ್ಯಾಯಿನಿ ಶಾಂತಿವಾಸ್, ಎಸ್.ಡಿ.ಎಂ.ಸಿ ಸುರೇಶ್ ಪೂಜಾರಿ, ದೇವರಾಜ್ ಅತ್ಯರಂಡ ,ಯತೀನ್, ಆದಿ ,ಸಿರಾಜ್, ಪ್ರದೀಪ್ ಮೈಂದಕುಮೇರ್ ಉಪಸ್ಥಿತರಿದ್ದರು.

ಗೆಳೆಯರ ಬಳಗದ ಪ್ರಮುಖರಾದ ಸಂತೋಷ್ ಕುಮಾರ್ ಕಾಪಿನಡ್ಕ ಸ್ವಾಗತಿಸಿದರು, ಇಂದು ಶೇಖರ್ ನಿರೂಪಿಸಿದರು. ಗೆಳೆಯರ ಬಳಗದ ಸದಸ್ಯರು ಸಹಕರಿಸಿದರು.

Related posts

ಮರೋಡಿ: ಇತ್ತೀಚೆಗೆ ನಿಧನರಾದ ಅಬುಶಾಲಿ ರವರ ಮನೆಗೆ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದ ಭೇಟಿ

Suddi Udaya

ಬಳಂಜ:ಆಮ್ಮಿ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ ಭಾಧ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲು ಬೆಳ್ತಂಗಡಿ ಧರ್ಮಪ್ರಾಂತ್ಯದ ಕೆ ಎಸ್ ಎಂ ಸಿ ಎ ವತಿಯಿಂದ ಅಗ್ರಹ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಿಂದ ಮುಂಡ್ರುಪ್ಪಾಡಿ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

Suddi Udaya
error: Content is protected !!