March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಲಯನ್ಸ್ ಕ್ಲಬ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಲಯನ್ಸ್ ಭವನದಲ್ಲಿ ಆಚರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ನ ಅಧ್ಯಕ್ಷ ಲಯನ್ ಮುರಳಿ ಬಲಿಪ ಇವರು ವಹಿಸಿಕೊಂಡರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ತಹಶೀಲ್ದಾರ್ ಪೃಥ್ವಿ ಸಾನಿಕಂ ಭಾಗವಹಿಸಿ ರಾಷ್ಟ್ರಸೇವೆಗಾಗಿ ನಾವು ಸದಾ ಸಿದ್ಧರಿರೋಣ ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಕರ್ತವ್ಯವನ್ನು ನಿರ್ವಹಿಸಿ ನಿವೃತ್ತರಾದ ಲಯನ್ ಎ. ಕೆ ಶಿವನ್ ಹಾಗೂ ಲಯನ್ ಗೋಪಾಲಕೃಷ್ಣ ಕಾಂಚೋಡು ಇವರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಮಾಜಿ ಯೋಧರಾದ ಲಯನ್ ಮೋಹನ ಎಚ್.ಕೆ ಉಪಸ್ಥಿತರಿದ್ದರು.

ಪೂರ್ವ ಪ್ರಾಂತ್ಯ ಅಧ್ಯಕ್ಷ ಲಯನ್ ಧರಣೇಂದ್ರ ಕೆ ಜೈನ್ ಸ್ವಾಗತಿಸಿದರು. ಪೂರ್ವ ಪ್ರಾಂತ್ಯ ಅಧ್ಯಕ್ಷ ಲಯನ್ ವಸಂತ ಶೆಟ್ಟಿ ಶ್ರದ್ಧಾ ಮುಖ್ಯ ಅತಿಥಿಗಳ ಪರಿಚಯವನ್ನು ಮಾಡಿದರು. ಕೋಶಾಧಿಕಾರಿ ಲಯನ್ ಸುಭಾಷಿಣಿ ಧನ್ಯವಾದ ಸಲ್ಲಿಸಿದರು. ಕಾರ್ಯದರ್ಶಿ ಲಯನ್ ಅಮಿತಾನಂದ ಹೆಗ್ಡೆ ಇವರು ಮುಂದಿನ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಲಯನ್ ಕೃಷ್ಣ ಕೆ ಆಚಾರ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಲಿಯೋ ಕ್ಲಬ್ ನ ಅಧ್ಯಕ್ಷ ಲಿಯೋ ಭಾಷಿಣಿ ಉಪಸ್ಥಿತರಿದ್ದರು. ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯ ಸಹಶಿಕ್ಷಕ ವೀರಣ್ಣ ಶೆಟ್ಟಿರವರಿಗೆ ಸೇವಾ ನಿವೃತ್ತಿ

Suddi Udaya

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!