22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಲಯನ್ಸ್ ಕ್ಲಬ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಲಯನ್ಸ್ ಭವನದಲ್ಲಿ ಆಚರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ನ ಅಧ್ಯಕ್ಷ ಲಯನ್ ಮುರಳಿ ಬಲಿಪ ಇವರು ವಹಿಸಿಕೊಂಡರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ತಹಶೀಲ್ದಾರ್ ಪೃಥ್ವಿ ಸಾನಿಕಂ ಭಾಗವಹಿಸಿ ರಾಷ್ಟ್ರಸೇವೆಗಾಗಿ ನಾವು ಸದಾ ಸಿದ್ಧರಿರೋಣ ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಕರ್ತವ್ಯವನ್ನು ನಿರ್ವಹಿಸಿ ನಿವೃತ್ತರಾದ ಲಯನ್ ಎ. ಕೆ ಶಿವನ್ ಹಾಗೂ ಲಯನ್ ಗೋಪಾಲಕೃಷ್ಣ ಕಾಂಚೋಡು ಇವರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಮಾಜಿ ಯೋಧರಾದ ಲಯನ್ ಮೋಹನ ಎಚ್.ಕೆ ಉಪಸ್ಥಿತರಿದ್ದರು.

ಪೂರ್ವ ಪ್ರಾಂತ್ಯ ಅಧ್ಯಕ್ಷ ಲಯನ್ ಧರಣೇಂದ್ರ ಕೆ ಜೈನ್ ಸ್ವಾಗತಿಸಿದರು. ಪೂರ್ವ ಪ್ರಾಂತ್ಯ ಅಧ್ಯಕ್ಷ ಲಯನ್ ವಸಂತ ಶೆಟ್ಟಿ ಶ್ರದ್ಧಾ ಮುಖ್ಯ ಅತಿಥಿಗಳ ಪರಿಚಯವನ್ನು ಮಾಡಿದರು. ಕೋಶಾಧಿಕಾರಿ ಲಯನ್ ಸುಭಾಷಿಣಿ ಧನ್ಯವಾದ ಸಲ್ಲಿಸಿದರು. ಕಾರ್ಯದರ್ಶಿ ಲಯನ್ ಅಮಿತಾನಂದ ಹೆಗ್ಡೆ ಇವರು ಮುಂದಿನ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಲಯನ್ ಕೃಷ್ಣ ಕೆ ಆಚಾರ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಲಿಯೋ ಕ್ಲಬ್ ನ ಅಧ್ಯಕ್ಷ ಲಿಯೋ ಭಾಷಿಣಿ ಉಪಸ್ಥಿತರಿದ್ದರು. ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ‘ಆಪ್ತ ಸಮಾಲೋಚನೆ ಮತ್ತು ವಿದ್ಯಾರ್ಥಿ ನಡವಳಿಕೆ’ ಕುರಿತು ತರಬೇತಿ ಕಾರ್ಯಾಗಾರ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

Suddi Udaya

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ : ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ನವೀಕರಣ: ಗ್ರಾಹಕರ ಸಹಕಾರಕ್ಕೆ ಮನವಿ

Suddi Udaya

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಸುಲ್ಕೇರಿಮೊಗ್ರು: ಸೇನರಪಲ್ಕೆ ನಿವಾಸಿ ಅಶ್ವಿನಿ ಅಸೌಖ್ಯದಿಂದ ನಿಧನ

Suddi Udaya
error: Content is protected !!