23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಲಯನ್ಸ್ ಕ್ಲಬ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಲಯನ್ಸ್ ಭವನದಲ್ಲಿ ಆಚರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ನ ಅಧ್ಯಕ್ಷ ಲಯನ್ ಮುರಳಿ ಬಲಿಪ ಇವರು ವಹಿಸಿಕೊಂಡರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ತಹಶೀಲ್ದಾರ್ ಪೃಥ್ವಿ ಸಾನಿಕಂ ಭಾಗವಹಿಸಿ ರಾಷ್ಟ್ರಸೇವೆಗಾಗಿ ನಾವು ಸದಾ ಸಿದ್ಧರಿರೋಣ ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಕರ್ತವ್ಯವನ್ನು ನಿರ್ವಹಿಸಿ ನಿವೃತ್ತರಾದ ಲಯನ್ ಎ. ಕೆ ಶಿವನ್ ಹಾಗೂ ಲಯನ್ ಗೋಪಾಲಕೃಷ್ಣ ಕಾಂಚೋಡು ಇವರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಮಾಜಿ ಯೋಧರಾದ ಲಯನ್ ಮೋಹನ ಎಚ್.ಕೆ ಉಪಸ್ಥಿತರಿದ್ದರು.

ಪೂರ್ವ ಪ್ರಾಂತ್ಯ ಅಧ್ಯಕ್ಷ ಲಯನ್ ಧರಣೇಂದ್ರ ಕೆ ಜೈನ್ ಸ್ವಾಗತಿಸಿದರು. ಪೂರ್ವ ಪ್ರಾಂತ್ಯ ಅಧ್ಯಕ್ಷ ಲಯನ್ ವಸಂತ ಶೆಟ್ಟಿ ಶ್ರದ್ಧಾ ಮುಖ್ಯ ಅತಿಥಿಗಳ ಪರಿಚಯವನ್ನು ಮಾಡಿದರು. ಕೋಶಾಧಿಕಾರಿ ಲಯನ್ ಸುಭಾಷಿಣಿ ಧನ್ಯವಾದ ಸಲ್ಲಿಸಿದರು. ಕಾರ್ಯದರ್ಶಿ ಲಯನ್ ಅಮಿತಾನಂದ ಹೆಗ್ಡೆ ಇವರು ಮುಂದಿನ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಲಯನ್ ಕೃಷ್ಣ ಕೆ ಆಚಾರ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಲಿಯೋ ಕ್ಲಬ್ ನ ಅಧ್ಯಕ್ಷ ಲಿಯೋ ಭಾಷಿಣಿ ಉಪಸ್ಥಿತರಿದ್ದರು. ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

Suddi Udaya

ಅಂತರ್ ಕಾಲೇಜು ಮೇಧಾನ್ವೇಷ 2023: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 42 ಲಕ್ಷ ಲಾಭ, 110 ಕೋಟಿ ವ್ಯವಹಾರ, ಶೇ.10 ಡಿವಿಡೆಂಟ್

Suddi Udaya

ಬೆಳ್ತಂಗಡಿ: ಅರುವ ಕೊರಗಪ್ಪ ಶೆಟ್ಟಿ ಅವರಿಗೆ “ಜಾನಪದ ಶ್ರೀ” ಪ್ರಶಸ್ತಿ

Suddi Udaya

ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya
error: Content is protected !!